Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

---Advertisement---

 

ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ ಭಕ್ತರು ದೇವಸ್ಥಾನದ ಬಳಿ ಕ್ಯೂ ನಿಂತಿದ್ದಾರೆ. ತಾಯಿಯ ದರ್ಶನ ಪಡೆಯಲು ಉತ್ಸುಕರಾಗಿದ್ದಾರೆ.

ಮೈಸೂರು ಸಂಸ್ಥಾನದ ಪ್ರಮೋದಾ ದೇವಿ ಅವರು ಕೂಡ ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆ 4 ಗಂಟೆಗೆ ದರ್ಶನ ಪಡೆದಿದ್ದಾರೆ. ಹಾಸನಾಂಬೆ ತಾಯಿಗೆ ಪ್ರಮೋದಾ ದೇವಿ ಅವರು ವಿಶೇಷ ಪೂಜೆ ಸಲ್ಲಿಸಿದರು. ತಾಯಿ ದರ್ಶನ ಪಡೆದು ಪುನೀತರಾದರು. ಪ್ರಮೋದಾ ದೇವಿ ಅವರನ್ನು ಕಂಡು ಭಕ್ತರು ಖುಷಿ ಪಟ್ಟರು.

ಮಧ್ಯರಾತ್ರಿಯಿಂದಾನೇ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಸರತಿ ಸಾಲಲ್ಲಿ ನಿಂತು ತಾಯಿಯ ದರ್ಶನ ಪಡೆದಿದ್ದಾರೆ. 10 ದಿನಗಳ ಕಾಲ ತಾಯಿಯ ದರ್ಶನಕ್ಕೆ ಅವಕಾಶ ಇರಲಿದೆ. ಇಂದಿನಿಂದ ಶುರುವಾಗಿರುವ ಹಾಸನಾಂಬೆಯ ದರ್ಶನ ನವೆಂಬರ್ 3ರವರೆಗೆ ನಡೆಯಲಿದೆ. ರಾತ್ರಿ 11 ಗಂಟೆಯವರೆಗೂ ತಾಯಿಯ ದರ್ಶನ ಭಾಗ್ಯ ಸಿಗಲಿದೆ. ಭಕ್ತರು ತಾಯಿಯ ದರ್ಶನವನ್ನು ಪಡೆದು ಪುನೀತರಾಗಬಹುದು.

ಹಾಸನಾಂಬೆಯ ದೇವಸ್ಥಾನದ ಗರ್ಭಗುಡಿಯ ಬಾಗಿಲು ವರ್ಷಕ್ಕೆ ಒಂದೇ ಸಲ ತೆಗೆಯುವುದು. ಹತ್ತು ದಿನ ಮಾತ್ರ ತೆಗೆದಿರುತ್ತದೆ. ಮೊದಲಿನಿಂದಾನೂ ಇದು ವಿಶಿಷ್ಠ ಸಂಪ್ರದಾಯವಾಗಿರುತ್ತದೆ. ಅಶ್ವಯುಜ ಮಾಸದ ಅಷ್ಟಮಿ ದಿನ ಬಾಗಿಲನ್ನು ಸ್ವಾಮೀಜಿ ಮತ್ತು ಹಿರಿಯರು ತೆಗೆಯುತ್ತಾರೆ. ಈ ವೇಳೆ ರಾಜಕಾರಣಿಗಳು ಕೂಡ ಇರುತ್ತಾರೆ. ಬಾಗಿಲ ತೆಗೆದಾಕ್ಷಣ ಕಳೆದ ವರ್ಷ ಹಚ್ಚಿದ ದೀಪ ಹಾಗೇ ಉರಿಯುತ್ತಿತ್ತು. ಇದನ್ನು ಕಂಡು ಭಕ್ತರು ಪುನೀತರಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment