Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನ್ನ ಮದುವೆಗೆ ದರ್ಶನ್ ಬರ್ತಾರೆ : ಜೈಲಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟ ತರುಣ್ ಸುಧೀರ್

---Advertisement---

 

 

ಬೆಂಗಳೂರು: ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಮದುವೆಯಾಗುತ್ತಿದ್ದಾರೆ. ಸದ್ಯ ಸ್ಯಾಂಡಲ್ ವುಡ್ ನಲ್ಲೆಲ್ಲಾ ಇದರದ್ದೇ‌ ಸುದ್ದಿ. ನಟಿ ಸೋನಲ್ ಜತೆಗೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗಾಗಲೇ ಅವರ ತಾಯಿ ಮಾಲತಿ ಸುಧೀಂದ್ರ ಅವರು ಸೊಸೆಯ ಬಗ್ಗೆ ಎಲ್ಲಾ ಚಾನೆಲ್ ಗಳಲ್ಲೂ ಮಾತನಾಡಿದ್ದಾರೆ. ತರುಣ್ ಸುಧೀರ್ ಕೂಡ ಹೌದು ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಮದುವೆ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿವೆ.

ಲಗ್ನಪತ್ರಿಕೆ ಹಂಚುವುದಕ್ಕೆ ಶುರು ಮಾಡಿರುವ ತರುಣ್ ಸುಧೀರ್,‌ಮೊದಲ ಪತ್ರಿಕೆಯನ್ನು ದರ್ಶನ್ ಅವರುಗೆ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಪತ್ರಿಕೆ ಕೊಟ್ಟು ಬಂದಿದ್ದಾರೆ. ಈ ವೇಳೆ ಮಾತನಾಡಿದ ತರುಣ್ ಸುಧೀರ್, ನಟ ದರ್ಶನ್ ಅವರುಗೆ ಹುಷಾರು ಇರಲಿಲ್ಲ. ಈಗ ಚೆನ್ನಾಗಿದ್ದಾರೆ. ಈಗಿನ ವಾತಾವರಣದಿಂದ ಜ್ವರ ಬಂದಿತ್ತು. ಯಾವಾಗಲೂ ನನ್ನನ್ನು ನೋಡಿ ಹೇಗೆ ರಿಯಾಕ್ಟ್ ಮಾಡುತ್ತಿದ್ದರೋ ಅದೇ ರೀತಿ ಇವತ್ತು ರಿಯಾಕ್ಟ್ ಮಾಡಿದ್ದಾರೆ‌. ಅವರಿಗಿಂತ ಹೆಚ್ಚು ವೀಕ್ ಆಗಿಬಿಟ್ಟಿದ್ದೀವಿ ನಾವೂ. ಹುಷಾರಿಲ್ಲದರ ಬಗ್ಗೆ ಚರ್ಚೆ ಮಾಡಿದಾಗ, ಏನಿಲ್ಲ ಮಗನೇ ಆರಾಮವಾಗಿ ಇದ್ದೀನಿ ಅಂದಿದ್ದಾರೆ. ನನ್ನ ಮದುವೆ ಬಗ್ಗೆ ದರ್ಶನ್ ಅವರಿಗೆ ಮೊದಲೇ ಗೊತ್ತಿತ್ತು. ದರ್ಶನ್ ಅವರು ಇಲ್ಲದೆ ಮದುವೆ ಆಗುವ ಕೊರಗು ಇತ್ತು.

ನಿಗದಿತ ದಿನಾಂಕದಂದೇ ಮದುವೆ ಆಗುವುದಕ್ಕೆ ಹೇಳಿದರು. ಅಷ್ಟರೊಳಗೆ ನಾನು ಬರ್ತೀನಿ ಎಂದಿದ್ದಾರೆ. ಅವರು ಏನು ತಪ್ಪು ಮಾಡಿಲ್ಲ ಎಂಬ ನಂಬಿಕೆಯಲ್ಲಿ ನಾವೆಲ್ಲ ಇದ್ದೇವೆ. ಅದು ಹಾಗೇ ಆಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ದರ್ಶನ್ ಅವರು ನನ್ನ ಮದುವೆ ಅಷ್ಟರಲ್ಲಿ ರಿಲೀಸ್ ಆಗ್ತಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...