Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಮಾಪತಿ ಎದುರಾಳಿಯ ಜೊತೆ ಕೈ ಜೋಡಿಸಿದ ದರ್ಶನ್ : ಸತೀಶ್ ರೆಡ್ಡಿ ಪರ ಪ್ರಚಾರ ಕಾರ್ಯ..!

Facebook
Twitter
Telegram
WhatsApp

ಉಮಾಪತಿ ಮತ್ತು ದರ್ಶನ್ ಒಂದು ಕಾಲದ ಆಪ್ತ ಗೆಳೆಯರು. ಆದರೆ ಏನೋ ಆಗಿ ಇನ್ನೇನೋ ನಡೆದದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ವಂಚನೆ ಕೇಸ್, ಮೈಸೂರು ಗೆಳೆಯರ ತನಕ ಹೋಗಿತ್ತು. ನಂತರ ನಡೆದ ಮೇಲೆ ಫ್ರೆಂಡ್ ಶಿಪ ಕಿತ್ತು ಹೋಯ್ತು. ಆದರೆ ಇದೀಗ ಮಾಜಿ ಗೆಳೆಯನ ವಿರುದ್ದ ಚುನಾವಣಾ ಅಖಾಡಕ್ಕೆ ಇಳಿಯಲು ದರ್ಶನ್ ಸಿದ್ದತೆ ನಡೆಸಿದ್ದಾರೆ.

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಸಿನಿಮಾ ನಿರ್ಮಾಣದ ಜೊತೆಗೆ ರಾಜಕೀಯ ಜೀವನ ಆರಂಭಿಸಲು ಎಲ್ಲಾ ಪ್ಲ್ಯಾನ್ ಮಾಡಿದ್ದಾರೆ. ಕಳೆದ ಬಾರಿಯೇ ಟಿಕೆಟ್ ಗಾಗಿ ಓಡಾಡಿದ್ದರು. ಆದರೆ ದಕ್ಕಿರಲಿಲ್ಲ. 2023ರ ಚುನಾವಣೆಯಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಬಳಿ ಮಾತುಕತೆಯನ್ನು ಮಾಡಿ ಆಗಿದೆ. ಈ ಬಾರಿ ಟಿಕೆಟ್ ಸಿಗುವುದು ಪಕ್ಕ ಆಗಿದೆ.

ಬೊಮ್ಮನಹಳ್ಳಿಯಲ್ಲಿ ಒಂದು ವೇಳೆ ಉಮಾಪತಿ ಶ್ರೀನಿವಾಸ್ ಸ್ಪರ್ಧೆ ಮಾಡಿದರೆ ಅವರ ಎದುರಾಳಿಯಾಗಿ ಬಿಜೆಪಿಯಿಂದ ಸತೀಶ್ ರೆಡ್ಡಿ ಸ್ಪರ್ಧೆ ಮಾಡಲಿದ್ದಾರೆ. ನಿನ್ನೆ ಸತೀಶ್ ರೆಡ್ಡಿ ಅವರ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆ ನಟ ದರ್ಶನ್ ಅವರ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದರು. ಜೊತೆಗೆ ಚುನಾವಣಾ ಪೂರ್ವವಾಗಿ ರೋಡ್ ಶೋ ಕೂಡ ನಡೆಸಿದರು. ಈ ಮೂಲಕ ಉಮಾಪತಿ ಶ್ರೀನಿವಾಸ್ ಎದುರಾಳಿಗೆ ಜೊತೆಯಾಗಿ ದರ್ಶನ್ ನಿಂತಿರುವುದು ಕಂಡು ಬಂದಿತು.

ದರ್ಶನ್ ಅವರಿಗೆ ಮೂರು ಪಕ್ಷದಲ್ಲೂ ಸ್ನೇಹಿತರಿದ್ದಾರೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಎಲ್ಲರಿಗೂ ಬೆಂಬಲವಾಗಿ ನಿಲ್ಲುತ್ತಾರೆ. ಹಾಗೆಯೇ ಸತೀಶ್ ರೆಡ್ಡಿಗೂ ಬೆಂಬಲ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!