ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಆದರೆ ಅಲ್ಲಿ ದರ್ಶನ್ ಗೆ ಯಾವುದೇ ರೀತಿಯ ವಿಐಪಿ ಟ್ರೀಟ್ಮೆಂಟ್ ನೀಡದೆ ಸಾಮಾನ್ಯ ಕೈದಿಯ ರೀತಿಯೇ ನೋಡಿಕೊಳ್ಳುತ್ತಿದ್ದಾರೆ. ಇದರಿಂದ ದರ್ಶನ್ ಗೆ ಜೈಲಿನಲ್ಲಿ ಸರಿಯಾಗಿ ನಿದ್ದೆ ಮಾಡುವುದಕ್ಕೂ ಆಗ್ತಾ ಇಲ್ಲ. ಕಳೆದ ಬಾತಿ ಕೋರ್ಟ್ ಮುಂದೆ ಹಾಜರಾದಾಗಲೇ ಜಡ್ಜ್ ಗಳಿಗೆ ಮನವಿ ಮಾಡಿಕೊಂಡಿದ್ದರು. ನಂಗೆ ಒಂದು ಚೂರು ವಿಷ ಕೊಟ್ಟು ಬಿಡಿ ಎಂದು ಕೇಳಿದ್ದರು. ಹಾಸಿಗೆ, ದಿಂಬಿಲ್ಲ, ಸೂರ್ಯನ್ನ ನೋಡಿ ಎಷ್ಟೋ ದಿನಗಳಾಯ್ತು ಎಂದಿದ್ದರು. ಕೋರ್ಟ್ ಕೂಡ ಅದನ್ನ ಕೊಟ್ಟು ಬಿಡಲು ಅನುಮತಿ ನೀಡಿದ್ದರು. ಆದರೂ ಆ ಸೌಲಭ್ಯವನ್ನ ಇನ್ನು ನೀಡಿಲ್ಲ.
ಈ ಸಂಬಂಧ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ 64 ನೇ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಾರಿಡಾರ್ ನಲ್ಲಿ ವಾಕ್ ಮಾಡುವುದಕ್ಕೆ ಮಾತ್ರ ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಹೇಳಿದ್ದ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸೆಷನ್ಸ್ ಕೋರ್ಟ್ ಗೆ ದರ್ಶನ್ ಪರ ವಕೀಲ ಎಸ್ ಸುಶೀಲ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಗೆ ಶಿಫಾರಸ್ಸು ಕೋರಿ ಮನವಿಯನ್ನು ಸೆಷನ್ಸ್ ಕೋರ್ಟ್ ಗೆ ಮಾಡಿಕೊಂಡಿದ್ದಾರೆ. ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಕೇಸ್ ಗೆ ಶಿಫಾರಸು ಮಾಡಿ ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ಹೋದಾಗ ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












