Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ.. ವಿನಯ್, ಪವನ್ ಸೂಚನೆ ಮೇರೆಗೆ ಅಪಹರಣವಾಗಿದೆ : ಜಾಮೀನು ಅರ್ಜಿಯಲ್ಲಿ ಉಲ್ಲೇಖ..!

---Advertisement---

ಬೆಂಗಳೂರು: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪ್ಲ್ಯಾನ್ ಮಾಡಿ ಕರೆತಂದು, ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಚಾರ್ಜ್ ಶೀಟ್ ನಲ್ಲೂ ಆರೋಪಿಗಳ ಪಟ್ಟಿ ಹಾಗೆಯೇ ಇದೆ. ಸದ್ಯ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆ ಅರ್ಜಿಯಲ್ಲಿನ ಮಾಹಿತಿಯು ಖಾಸಗಿ ಚಾನೆಲ್ ಗಳಿಗೆ ಸೋರಿಕೆಯಾಗಿದೆ. ಅದರಲ್ಲೂ ದರ್ಶನ್ ಗೂ ರೇಣುಕಾಸ್ವಾಮಿ ಕೊಲೆಗೂ ಯಾವುದೇ ಸಂಬಂಧವಿಲ್ಲ ಎಂಬುದು ಉಲ್ಲೇಖವಾಗಿದೆಯಂತೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಆದರೆ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ನಾನು ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಇನ್ನು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಿನ್ನೆಯಷ್ಟೇ ನಡೆದಿದೆ. ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ನಾಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಸಾವುರಾರು ಪುಟಗಳ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಅವರು ಹೊಡೆದಿರುವ ಬಗ್ಗೆಯೂ ಪೊಲೀಸರು ಉಲ್ಲೇಖ ಮಾಡಲಾಗಿದೆ. ತೀರಾ ಬರ್ಬರವಾಗಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಲಾಗಿದೆ. ದರ್ಶನ್ ಪರ ವಕೀಲರು ಚಾರ್ಜ್ ಶೀಟ್ ಅನ್ನು ಗಮನವಿಟ್ಟು ನೋಡಿ ಈಗ ಕೋರ್ಟ್ ಮುಂದೆ ವಾದಕ್ಕೆ ನಿಂತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...