Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಲೆ ಕೇಸಲ್ಲಿ ಜೈಲಲ್ಲಿರುವ ದರ್ಶನ್ : ಮೊದಲ ಬಾರಿಗೆ ಅಣ್ಣನ ಬಗ್ಗೆ ಮಾತಾಡಿದ ದಿನಕರ್ ತೂಗುದೀಪ..!

Facebook
Twitter
Telegram
WhatsApp

ತುಮಕೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್, ಈಗಾಗಲೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಿನ್ನೆ ಕೂಡ ಅರ್ಜಿಯ ವಿಚಾರಣೆ ನಡೆದಿದ್ದು, ಜಾಮೀನು ಸಿಗುವ ಭರವಸೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದರು. ಆದರೆ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ದರ್ಶನ್ ಅವರ ತಮ್ಮ ದಿನಕರ್ ತೂಗುದೀಪ ಅವರು ತಮ್ಮ ಅತ್ತಿಗೆಯ ಜೊತೆಗೆ ಪ್ರತಿಸಲ ಜೈಲಿಗೆ ಭೇಟಿ ನೀಡಿದ್ದಾರೆ. ದರ್ಶನ್ ಅವರ ಬಳಿ ಮಾತನಾಡಿ, ಜಾಮೀನು ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ವೇದಿಕೆ ಮೇಲೆ ಅಣ್ಣನ ಬಗ್ಗೆ ಮಾತನಾಡಿದ್ದಾರೆ.

 

ದಿನಕರ್ ತೂಗುದೀಪ ನಿರ್ದೇಶನದ ರಾಯಲ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ವಿರಾಟ್ ಅಭಿನಯದ ಈ ಸಿನಿಮಾದ ಪ್ರಚಾರ ಕಾರ್ಯ ಆರಂಭವಾಗಿದೆ. ಹಾಡು ಬಿಡುಗಡೆಯನ್ನು ತುಮಕೂರಿನಲ್ಲಿ, ವಿದ್ಯಾರ್ಥಿಗಳಿಂದ ಮಾಡಿಸಲಾಗಿತ್ತು. ಈ ವೇಳೆ ವೇದಿಕೆ ಮೇಲೆ ಅಣ್ಣನ ಬಗ್ಗೆ ಮಾತನಾಡಿದ್ದಾರೆ.

‘ಒಷ್ಟು ದಿನ ನಾನು ಎಲ್ಲಿಯೂ ಹೋಗಲಾಗಿರಲಿಲ್ಲ. ಯಾರ ಬಳಿಯೂ ಮಾತನಾಡಲಾಗಿರಲಿಲ್ಲ. ಆದರೆ ಇಂದು ಈ ವೇದಿಕೆ ಬಳಸಿಕೊಂಡು ಮಾತನಾಡುತ್ತಿದ್ದೇನೆ. ನಮ್ಮ ಕಷ್ಟದ ಸಮಯದಲ್ಲಿ ನಮಗೆ ಬೆಂಬಲ ನೀಡುತ್ತಿರುವ, ಬೆನ್ನಿಗೆ ನಿಂತ‌ ಎಲ್ಲರಿಗೂ ಧನ್ಯವಾದಗಳು. ನಾವೂ ಹೆಸರು ಮಾಡಿರುವುದಕ್ಕೆ ಡಿ ಬಾಸ್ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಕಾರಣ. ನಿಮ್ಮ ಈ ಪ್ರೀತಿ ದರ್ಶನ್ ಹಾಗೂ ಅವರ ಕುಟುಂಬದ ಮೇಲೆ ಹೀಗೆ ಇರಲಿ. ನಿಮ್ಮ ಪ್ರೀತಿ ಇರುವ ತನಕ ಡಿ ಬಾಸ್ ಗೆ ಯಾರೂ ಏನು ಮಾಡುವುದಕ್ಕೆ ಸಾಧ್ಯವೇ ಇಲ್ಲ ಎಂದು ದಿನಕರ್ ತೂಗುದೀಪ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಆಶಾಕಿರಣ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ : ಕಳೆದ 13 ವರ್ಷದಲ್ಲಿ 800 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

ಸುದ್ದಿಒನ್, ಚಿತ್ರದುರ್ಗ ಅ.06 : ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ನಮ್ಮ ಸಂಸ್ಥೆಯ ಗುರಿಯಾಗಿದೆ. ಇಲ್ಲಿ ಸಹಾಯ ಪಡೆದವರು ಮುಂದಿನ ದಿನದಲ್ಲಿ ಬೇರೆಯವರಿಗೆ ಸಹಾಯವನ್ನು ಮಾಡುವುದರ ಮೂಲಕ ಸಮಾಜದ ಋಣವನ್ನು ತೀರಿಸುವಂತೆ

ಮಹಿಳೆ ಸ್ವಾವಲಂಬಿಯಾಗಿ ಆರ್ಥಿಕವಾಗಿ ಬಲಶಾಲಿಯಾದರೆ ಇಡೀ ಕುಟುಂಬವೆ ಸದೃಢವಾದಂತೆ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಒಂದು ಕಾಲದಲ್ಲಿ ಅಡುಗೆ ಮನೆಗೆ ಮಾತ್ರ ಸೀಮಿತಳಾಗಿದ್ದ ಮಹಿಳೆ ಈಗ ಎಲ್ಲಾ

ಬಿಗ್ ಬಾಸ್ ನಿಂದ ಮೊದಲ ವಾರವೇ ಹೊರ ಬಂದ್ರು ಸ್ಟ್ರಾಂಗ್ ಆಗಿ ಕಾಣಿಸಿಕೊಂಡಿದ್ದ ನಟಿ..!

ಬಿಗ್ ಬಾಸ್ ಸೀಸನ್ 11 ವಾರಕ ಕಥೆ ಕಿಚ್ಚನ ಜೊತೆಗೆ ಅದ್ಭುತವಾಗಿ ನಡೆದಿದೆ. ಇಂದು ಸೂಪರ್ ಸಂಡೇ ವಿತ್ ಸುದೀಪ ಪಂಚಾಯ್ತಿ ನಡೆಯಲಿದ್ದು, ಈ ಪಂಚಾಯ್ತಿಯಲ್ಲಿಯೇ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಮೊದಲ ವಾರಕ್ಕೆ ನಟಿ

error: Content is protected !!