Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಾಡಿಗಳಿಗೆ ದರ್ಶನ್ ಖೈದಿ ನಂಬರ್ : ಕೇಸ್ ಹಾಕುವ ಎಚ್ಚರಿಕೆ ನೀಡಿದ ಟ್ರಾಫಿಕ್ ಪೊಲೀಸರು..!

Facebook
Twitter
Telegram
WhatsApp

 

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಖೈದಿ ನಂಬರ್ 6106 ನೀಡಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಪೋರ್ಟ್ ಮಾಡುವುದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಂಬರ್ ಗೂ ಬಾರೀ ಡಿಮ್ಯಾಂಡ್ ಬಂದಿದೆ. ದರ್ಶನ್ ಖೈದಿ ನಂಬರ್ ಅನ್ನು ಅಭಿಮಾನಿಗಳು ತಮ್ಮ ತಮ್ಮ ಗಾಡಿಗಳ ಮೇಲೆ ಅಂಟಿಸುತ್ತಿದ್ದಾರೆ. ಹೀಗಾಗಿ ಟ್ರಾಫಿಕ್ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ.

ಖೈದಿ ನಂಬರ್ ಅಂಟಿಸುವ ಬರದಲ್ಲಿ ಅಭಿಮಾನಿಗಳು ತಮ್ಮ ತಮ್ಮ ಗಾಡಿ ನಂಬರ್ ಗಳನ್ನೇ ಮರೆ ಮಾಚುತ್ತಿದ್ದಾರೆ. ಇದು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದಂತೆಯೇ ಸರಿ. ಹೀಗಾಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ದಾಖಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ನೀಡಿದ್ದಾರೆ. ನಂಬರ್ ಪ್ಲೇಟ್ ಮೇಲೆ ಖೈದಿ ನಂಬರ್ ಅಂಟಿಸುವವರಿಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಿಸುವುದಾಗಿ ತಿಳಿಸಿದ್ದಾರೆ.

 

ಇನ್ನು ದರ್ಶನ್ ಅವರನ್ನು ಭೇಟಿಯಾಗಲು ಅಭಿಮಾನುಗಳು ಕೂಡ ಹರಸಾಹಸ ಪಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮುಂದೆ ಹೋಗಿ ನಿಂತು ಬರುತ್ತಿದ್ದಾರೆ. ಕುಟುಂಬಸ್ಥರಿಗೆ ಬಿಟ್ಟರೆ ಅಭಿಮಾನಿಗಳಿಗಾಗಲೀ, ಸಾರ್ವಜನಿಕರಿಗಾಗಲಿ ಭೇಟಿಗೆ ಅವಕಾಶ ನೀಡುತ್ತಿಲ್ಲ. ವಿಜಯಲಕ್ಷ್ಮೀ ತನ್ನ ಪತಿಯನ್ನು ಬಿಡಿಸಲು ಫೇಮಸ್ ವಕೀಲರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ಸತ್ಯಮೇವ ಜಯತೆ ಎಂದು ಪೋಸ್ಟ್ ಕೂಡ ಹಾಕಿದ್ದರು. ಜೊತೆಗೆ ಅಭಿಮಾನಿಗಳಿಗೆ ಶಾಂತರೀತಿಯಿಂದ ಇರಲು ಸೂಚನೆಯನ್ನು ನೀಡಿದ್ದರು. ನಿನ್ನೆಯಷ್ಟೇ ರಕ್ಷಿತಾ ಹಾಗೂ ಪ್ರೇಮ್ ಜೈಲಿಗೆ ಭೇಟಿ ಕೊಟ್ಟು, ದರ್ಶನ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದಾರೆ. ವಿನೋದ್ ಪ್ರಭಾಕರ್ ಕೂಡ ಜೈಲಿಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು

  ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

  ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

  ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ

error: Content is protected !!