Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೇಗ ವಿಚಾರಣೆ ನಡೆಸುವುದಕ್ಕೆ ಕೋರ್ಟ್ ಗೆ ಮನವಿ ಸಲ್ಲಿಸಿದ ದರ್ಶನ್

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮೊದಲ ಬಾರಿಗೆ ಜೈಲಿಗೆ ಹೋದಾಗ ಆರೋಗ್ಯ ಸಮಸ್ಯೆಯನ್ನ ಹೇಳಿ ಜಾಮೀನು ಪಡೆದಿದ್ದರು. ಈಗ ಸಾಕ್ಷಿಗಳ ಟ್ರಯಲ್ ನಡೆಯುತ್ತಿರುವ ಕಾರಣ ಜಾಮೀನು ಸಿಗುವುದಕ್ಕೂ ಸಾಧ್ಯವಿಲ್ಲ. ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದರೂ ಅದು ರಿಜೆಕ್ಟ್ ಆಗುವ ಎಲ್ಲಾ ಸಾಧ್ಯತೆಗಳು ಇದೆ. ಹೀಗಾಗಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಆದರೆ ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿಯೊಂದನ್ನ ಮಾಡಿದ್ದಾರೆ.

ಆದಷ್ಟು ಬೇಗ ಟ್ರಯಲ್ ಮುಗಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಟ್ರಯಲ್ ಬೇಗನೇ ನಡೆಸುವುದಕ್ಕೆ ಅವಕಾಶವಿದೆಯಾ..? ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಏನು ಹೇಳುತ್ತೆ ಎಂಬ ಕುತೂಹಲ ಎಲ್ಲರಿಗೂ ಇದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸಾಕ್ಷಿಗಳು ಕಡಿಮೆ ಏನು ಇಲ್ಲ. ಹೆಚ್ಚಾಗಿರುವ ಕಾರಣ ಸಾಕ್ಷಿಗಳ ವಿಚಾರಗೇನೆ ಸುಮಾರು ಒಂದು ವರ್ಷಗಳ ಕಾಲ ಬೇಕಾಗುತ್ತದೆ.

ಟ್ರಯಲ್ ಮುಗಿದರೆ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು. ಜಾಮೀನು ಸಿಗುವ ಸಾಧ್ಯತೆಯೂ ಇರುತ್ತದೆ. ಹೀಗಾಗಿಯೇ ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಅದರಲ್ಲೂ ಡೇ ಟು ಡೇ ಬೇಸಿಸ್ ನಲ್ಲಿ ವಿಚಾರಣೆ ನಡೆಸುವುದಕ್ಕೆ ಮನವಿ ಮಾಡಿದ್ದಾರೆ. ಇಲ್ಲಿ ದರ್ಶನ್ ಪರ ವಕೀಲರ ಅರ್ಜಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ತ್ವರಿತಗತಿಯಲ್ಲಿ ವಿಚಾರಣೆ ನಡೆಸುವುದಕ್ಕೆ ಪೊಲೀಸರು ಕೂಡ ಆಕ್ಷೇಪ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಚಾರಣೆ ಮುಗಿದರೆ ಸಾಕು ಎಂಬಂತಾಗಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ. ಪವಿತ್ರಾ ಗೌಡ ಕೂಡ ಇತ್ತೀಚೆಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಗಳಿಗೆ ಪರೀಕ್ಷೆ ಇದೆ ಅಂತ. ಆದರೆ ಜಾಮೀನು ಅರ್ಜಿ ವಜಾಗೊಂಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...