Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾವೇರಿಗಾಗಿ ಅಹೋರಾತ್ರಿ ಧರಣಿ ರೈತ ಶಾಸಕ ದರ್ಶನ್ ಪುಟ್ಟಣ್ಣಯ್ಯ

---Advertisement---

ಮಂಡ್ಯ: ಮಳೆ ಕೈ ಕೊಟ್ಟಂತೆಯೇ ಆಗಿದೆ. ಆಗಸ್ಟ್ ತಿಂಗಳು ಮುಗಿದರು ಇನ್ನು ಮಳೆ ಬರುವ ಸೂಚನೆಯೇ ಕಾಣುತ್ತಿಲ್ಲ. ರೈತರು ವರುಣ ದೇವರ ಮೇಲಿನ ನಂಬಿಕೆಯಿಂದ ಇನ್ನು ಕಾಯುತ್ತಿದ್ದಾರೆ. ಈಗ ಡ್ಯಾಂಗಳಲ್ಲಿ ಇರುವ ನೀರನ್ನಷ್ಟೇ ನಂಬಿಕೊಳ್ಳುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗಾಗಿ ಕಾವೇರಿ ನೀರು ಹರಿಸುತ್ತಿರುವುದನ್ನು ರೈತರು ಅಂದಿನಿಂದ ವಿರೋಧಿಸಿಕೊಂಡೆ ಬಂದಿದ್ದಾರೆ. ಇದೀಗ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಅಹೋರಾತ್ರಿ ಧರಣಿ ಕೂತಿದ್ದಾರೆ.

ಈಗಾಗಲೇ ಕೆ. ಆರ್. ಎಸ್. ನೀರಿನ ಮಟ್ಟ 100 ಅಡಿಗೆ ಇಳಿದಿದೆ. ತಮಿಳುನಾಡಿಗೆ ಕಾವೇರಿ ಪ್ರಾಧಿಕಾರ ಹೇಳಿದಂತೆ 15 ದಿನಗಳ ಕಾಲ ನೀರು ಹರಿಸಿದರೆ, ಕೆ. ಆರ್. ಎಸ್ ನಲ್ಲಿ 90 ಅಡಿಗೆ ಕುಸಿಯಲಿದೆ. ಕೋಟ್ಯಾಂತರ ಮಂದಿ ಕೃಷಿ ಮತ್ತು ಕುಡಿಯುವ ನೀರಿಗಾಗಿ ಕೆಆರ್ಎಸ್ ಅನ್ನೇ ನಂಬಿಕೊಂಡು ಕೂತಿದ್ದಾರೆ. ಹೀಗಿರುವಾಗ ಪ್ರತಿದಿನ ನೀರು ಹರಿಸಿದರೆ, ಡ್ಯಾಂ ಖಾಲಿಯಾಗುತ್ತದೆ ಎಂಬ ಆತಂಕ ಮನೆ ಮಾಡಿದೆ.

ಇನ್ನು ಧರಣಿ ಕೂತಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿದ್ದು, ಹೀಗೆ ನೀರು ಹರಿಸಿದರೆ 15 ದಿನದಲ್ಲಿಯೇ ನೀರು ಖಾಲಿಯಾಗುತ್ತದೆ. ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗಿಯಾಗಿ, ಕುಡೊಯುವ ನೀರು ಉಳಿಸಿಕೊಳ್ಳಬೇಕಿದೆ. ಈಗಾಗಲೇ ನಾಟಿ ಮಾಡಿರುವ ಬೆಳೆಗೆ ನೀರು ಬೇಕಾಗಲಿದೆ. ಬೆಂಗಳೂರಿನ ಜನ ಮೊದಲು ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ಎರಡು ಕೋಟಿ ಜನ ಕಾವೇರಿ ನೀರನ್ನೇ ನಂಬಿಕೊಂಡಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...