Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್, ರಾಕ್ಲೈನ್, ಅಭಿಷೇಕ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜ್ ಗೆ ನೊಟೀಸ್ ಸಾಧ್ಯತೆ: ಕಾರಣವೇನು ಗೊತ್ತ..?

---Advertisement---

 

 

ಬೆಂಗಳೂರು: ದರ್ಶನ್, ರಾಕ್ಲೈನ್ ವೆಂಕಟೇಶ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜು ಅವರಿಗೆ ಸುಬ್ರಮಣ್ಯನಗರ ಪೊಲೀಸರು ನೋಟೀಸ್ ಜಾರಿ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೆ ಕಾರಣ ಜೆಟ್ ಲ್ಯಾಗ್ ನಲ್ಲಿ ಮುಂಜಾನೆವರೆಗೂ ಪಾರ್ಟಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನೋಟೀಸ್ ಜಾರಿ ಮಾಡುವ ಸಾಧ್ಯತೆ ಇದೆ.

 

ಇದಲ್ಲದೆ ಐದು ಜನ ಪೊಲೀಸರಿಗೂ ನೋಟೀಸ್ ನೀಡಲು ನಿರ್ಧರಿಸಲಾಗಿದೆ. ಮಧ್ಯರಾತ್ರಿ 3.15ರ ತನಕ ಜೆಟ್ ಲ್ಯಾಗ್ ನಲ್ಲಿ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಸೆಲೆಬ್ರೆಟಿಗಳು ಭಾಗಿಯಾಗಿದ್ದರು ಎನ್ನಲಾಗಿದ್ದು, ಅದರಲ್ಲಿ ಟಾಪ್ ಟೆನ್ ಸೆಲೆಬ್ರೆಟಿಗಳಿಗೆ ನೋಟೀಸ್ ನೀಡುವ ನಿರ್ಧಾರ ಮಾಡಲಾಗಿದೆ. ಸೆಲೆಬ್ರೆಟಿಗಳಿಗೆ ನೋಟೀಸ್ ನೀಡಿ ಹೇಳಿಕೆ ಪಡೆಯಲಾಗುವುದು ಎಂದು, ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

 

ಮಧ್ಯರಾತ್ರಿಯಾಗಿದ್ದರು ಪೊಲೀಸರು ಯಾಕೆ ಅಲ್ಲಿ ಹೋಗಿ ಪರಿಶೀಲನೆ ಮಾಡಿಲ್ಲ ಎಂಬ ಕಾರಣಕ್ಕೆ ಐದು ಜನ ಪೊಲೀಸರಿಗೆ ನೋಟೀಸ್ ನೀಡಲಾಗುತ್ತದೆ ಎಂದಿದ್ದಾರೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಠಾಣಾಧಿಕಾರಿ, ಒಬ್ಬ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಕಾನ್ಸ್ ಟೇಬಲ್ ಗಳಿಗೆ ನೋಟೀಸ್ ಕಳುಹಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment