ಬೆಂಗಳೂರು: ನಾಳೆ ಅಂದ್ರೆ ಸೆಪ್ಟೆಂಬರ್ 2ಕ್ಕೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆ ಇಂದು ಕಿಚ್ಚ ಸುದೀಪ್ ಒಂದು ಸುದ್ದಿಗೋಷ್ಟಿಯನ್ನ ಕರೆದಿದ್ದರು. ಈ ಸುದ್ದಿಗೋಷ್ಟಿಯ ವಿಶೇಷತೆಯೇ ತಮ್ಮ ಮುಂದಿನ ಸಿನಿಮಾ ಹಾಗೂ ಹುಟ್ಟುಹಬ್ಬದ ಬಗ್ಗೆ ಮಾತನಾಡುವುದಾಗಿತ್ತು. ಈ ವೇಳೆ ಸುದೀಪ್ ಅವರು ದರ್ಶನ್ ಅವರ ಜೊತೆಗಿನ ಒಡನಾಟವನ್ನು ನೆನೆದಿದ್ದಾರೆ.
ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರು ಎಂಥ ದೋಸ್ತಿಗಳಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮತ್ತೆ ಅವರು ಒಂದಾಗಲಿ ಎಂದೇ ಎಲ್ಲರು ಬಯಸುತ್ತಿದ್ದಾರೆ. ಆದರೆ ಆ ಕನಸು ನನಸಾಗುವುದೇ ಅನುಮಾನವಿರಬೇಕು. ಆದರೂ ಅಭಿಮಾನಿಗಳು ಸದಾ ದೇವರಲ್ಲಿ ಬೇಡಿಕೊಳ್ತಾ ಇರ್ತಾರೆ. ಅದರ ನಡುವೆಯೇ ಸುದೀಪ್ ಅವರು ದರ್ಶನ್ ಅವರು ಕಲಿಸಿದ ಕುದುರೆ ಸವಾರಿ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ನನಗೆ ಕುದುರೆ ಹತ್ತೋದನ್ನ ಹೇಳಿಕೊಟ್ಟರು. ಕುದುರೆ ಓಡಿಸುವುದು ಕಷ್ಟ. ಒಂದು ಸಲ ಬಿದ್ದಿದ್ದೆ. ಅದಕ್ಕಾಗಿ ನಾನು ಪೌರಾಣಿಕ ಪಾತ್ರ ಮಾಡಲ್ಲ. ನನಗೆ ಕುದುರೆ ಓಡಿಸೋದು ಆಗಲ್ಲ. ಯಾವುದೋ ಒಂದು ಪಾತ್ರ ಸಿಕ್ಕಿತ್ತು. ಆಗ ಪ್ರಾಕ್ಟೀಸ್ ಮಾಡುವಾಗ ಅನುಭವ ಆಯ್ತು. ಆಗ ಹೇಳಿದ್ರು, ಹೀರೋ ಅಂದ್ರೆ ಫೈಟ್ ಮಾಡೋದು ಕಲಿಯಬೇಕು. ಕುದುರೆ ಓಡಿಸುವುದನ್ನು ಕಲಿಯಬೇಕು ಅಂತ ಏನೇನೋ ಹೇಳಿದ್ದರು. ನಾನು ಸೀರಿಯಸ್ ಆಗಿ ತೆಗೆದುಕೊಂಡಿದ್ದೆ. ಕಲಿತೆ ಕೂಎ. ಒಂದು ವಾರ ಪ್ರಾಕ್ಟೀಸ್ ಮಾಡಿದ್ದೆ. ಹತ್ತು ದಿನ ಚೆನ್ನಾಗಿ ಓಡಿಸಿದೆ. ಒಂದು ಸುಮ್ಮನೆ ನಿಂತಿದ್ದ ಕುದುರೆ ಯಾಕೆ ಎಗರಿತು ಅಂತ ಗೊತ್ತಿಲ್ಲ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









