ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕನ್ನಡ ಇಂಡಸ್ಟ್ರಿಯಲ್ಲಿ ದರ್ಶನ್ ಹಾಗೂ ಸುದೀಪ್ ಕುಚಿಕು ಗೆಳೆಯರಾಗಿದ್ದವರು. ತಮ್ಮ ಸ್ನೇಹದಿಂದ ಇತಿಹಾಸ ಸೃಷ್ಟಿ ಮಾಡಬೇಕಿದ್ದವರು. ಆದರೆ ಇಬ್ಬರ ನಡುವಿನ ಅಂತರ ಸ್ಟಾರ್ ವಾರ್, ಫ್ಯಾನ್ ಅಂತ ನಡೆಯುತ್ತಲೇ ಇರುತ್ತದೆ. ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲೆಲ್ಲಾ ತಿರುಗೇಟು ಕೊಡುವ ಪೋಸ್ಟರ್ ಗಳೇ ಓಡಾಡುತ್ತಿವೆ. ಇದರ ನಡುವೆ ಈ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತಾ, ಪ್ರೇಮ್, ಧ್ರುವ ಪ್ರತಿಕ್ರಿಯೆ ನೀಡಿದ್ದಾರೆ. ತಾವೂ ಕಂಡಂತ ದರ್ಶನ್ ಹಾಗೂ ಸುದೀಪ್ ಹೇಗೆ ಎಂಬುದನ್ನ ತಿಳಿಸಿದ್ದಾರೆ.
ನನ್ನ ಮುಂದೆ ಸುದೀಪ್ ಅವರು ದರ್ಶನ್ ಬಗ್ಗೆಯಾಗಲಿ, ದರ್ಶನ್ ಕುಟುಂಬದ ಬಗ್ಗೆಯಾಗಲಿ ಮಾತನಾಡಿಲ್ಲ. ಮಧ್ಯದಲ್ಲಿ ಯಾರೋ ಕಿತಾಪತಿ ಮಾಡುತ್ತಾರೆ. ದಕ್ಕೆ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ಕಿವಿಗೊಡಬಾರದು. ಸುದೀಪ್ ಅವರು ಒಂದು ಒಳ್ಳೆಯ ಮಾತು ಹೇಳಿದ್ದಾರೆ. ಸಿನಿಮಾ ಚೆನ್ನಾಗಿ ಇದ್ದರೆ ಮಾತ್ರ ಫ್ಯಾನ್ಸ್ ಬರುತ್ತಾರೆ. ಸಿನಿನಾ ಚೆನ್ನಾಗಿಲ್ಲ ಅಂದ್ರೆ ಯಾರೂ ಬರಲ್ಲ ಅಂತ ಹೇಳಿದ್ದಾರೆ. ಇಲ್ಲಿ ಹೀರೋ, ಹೀರೋಗಿರಿಗಿಂತ ಸಿನಿಮಾ ದೊಡ್ಡದು. ಸುದೀಪ್ ಮತ್ತು ದರ್ಶನ್ ಅವರ ಮನಸ್ತಾಪಕ್ಕೆ ಅವರ ವೈಯಕ್ತಿಕ ಕಾರಣ ಇರಬಹುದು. ಆದರೆ ಯಾವತ್ತೂ ಕೂಡ ಅವರು ಪರಸ್ಪರ ಬೈದುಕೊಂಡಿಲ್ಲ, ಕೆಟ್ಟದಾಗಿ ಮಾತನಾಡಿಲ್ಲ ಎಂದಿದ್ದಾರೆ.
ಇದೇ ವಿಚಾರಕ್ಕೆ ಧ್ರುವ ಸರ್ಜಾ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಕೆಡಿ ಸಿನಿಮಾವನ್ನು ಪೈರಸಿ ಮಾಡುವ ಆತಂಕ ಆ ಟೀಂ ಅನ್ನು ಕಾಡುತ್ತಿದೆ. ಇನ್ನು ದರ್ಶನ್ ಹಾಗೂ ವಿಜಯಲಕ್ಷ್ಮೀಗೆ ಆತ್ಮೀಯವಾಗಿರುವ ರಕ್ಷಿತಾ ಪ್ರತಿಕ್ರಿಯೆ ನೀಡಿದ್ದು, ಸುದೀಪ್ ಅವರಿಗೆ ವಿಜಯಲಕ್ಷ್ಮೀ ಆ ಮಾತನ್ನ ಹೇಳಿಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್