Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಜಾಮೀನು ಅರ್ಜಿ ಸೆ.30ಕ್ಕೆ ಮುಂದೂಡಿಕೆ..!

---Advertisement---

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಸೆಪ್ಟೆಂಬರ್ 30ಕ್ಕೆ ಅಂದ್ರೆ ಮುಂದಿನ ಸೋಮವಾರಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.

ಇಂದು ವಿಚಾರಣೆಯನ್ನು ನಡೆಸಿದ ಕೋರ್ಟ್, ಸೆಪ್ಟೆಂಬರ್30ಕ್ಕೆ ಮುಂದೂಡಿಕೆ ಮಾಡಿದೆ‌. ದರ್ಶನ್ ಪರವಾದ ವಕೀಲರು ವಾದ ಮಾಡುವುದಕ್ಕೆ ಕಾಲಾವಕಾಶ ಕೋರಿದ ಹಿನ್ನೆಲೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ವಕೀಲರಾದ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಆಕ್ಷೇಪಣೆ ಸಲ್ಲಿಸುವುದಕ್ಕೆ ತಡ ಮಾಡುತ್ತಿದ್ದಾರೆ. ಈ ವಿಚಾರವನ್ನು ದರ್ಶನ್ ಪರ ವಕೀಲರು ಕೋರ್ಟ್ ನಲ್ಲಿ ವಾದ ಮಾಡಿದ್ದರು. ಆದರೆ ಈಗ ದರ್ಶನ್ ಪರ ವಕೀಲರೇ ಸಮಯ ತೆಗೆದುಕೊಂಡಿದ್ದಾರೆ. ಅದಕ್ಕೆ ಕಾರಣ ದರ್ಶನ್ ಪರ ವಾದ ಮಂಡಿಸಲು ಹಿರಿಯ ವಕೀಲರು ಬರಬೇಕಾಗಿತ್ತು. ಹೀಗಾಗಿ ವಾದ ಮಂಡಿಸಲು ಸಮಯ ಕಾಲಾವಕಾಶ ಪಡೆದಿದ್ದಾರೆ‌.

ದರ್ಶನ್ ಪರ ವಕೀಲರಾದ ನಾಗೇಶ್ ಅವರು, ವಾದ ಮಂಡಿಸಲು ಬರಬೇಕಿತ್ತು. ಆದರೆ ಅವರು ಬಂದಿಲ್ಲದ ಕಾರಣಕ್ಕೆ ಕಾಲಾವಕಾಶ ಕೇಳಿದರು. ಇದೆ ವೇಳೆ ಸರ್ಕಾರಿ ವಕೀಲರಾದ ಪ್ರಸನ್ನ ಅವರು ಪ್ರತಿವಾದ ಮಂಡಿಸಿದರು. ಇಷ್ಟು ದಿನ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ತಕರಾರು ತೆಗೆದಿದ್ದರು. ಆದರೆ ಈಗ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ. ಆದರೂ ಕಾಲವಕಾಶ ಕೇಳುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಆದರೆ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಕೇಳಿದ್ದರಿಂದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದಾರೆ. ಸೆಪ್ಟೆಂಬರ್30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment