Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿಕೆ: ನಟನ ಪರ ವಕೀಲರ ವಾದವೇನು..?

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ನೂರು ದಿನಗಳಿಂದ ಜೈಲುವಾಸದಲ್ಲಿದ್ದು ಬೇಸತ್ತು ಹೋಗಿದ್ದಾರೆ. ಯಾವಾಗ ಹೊರಗೆ ಬರ್ತೀನಿ ಅಂತ ಕಾಯುತ್ತಿದ್ದಾರೆ. ಎ2 ಆರೋಪಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನು ನೋಡಲು ಅವರ ಮನೆಯವರು ಆಗಾಗ ಬಳ್ಳಾರಿಗೆ ಹೋಗುತ್ತಿದ್ದಾರೆ. ಇಂದು ದರ್ಶನ್ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

57ನೇ ಸಿಸಿಹೆಚ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದರೆ ಕೋರ್ಟ್ ವಾದ ಪ್ರತಿವಾದದ ಬಳಿಕ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 23 ಅಂದ್ರೆ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಈಗ ಸೋಮವಾರ ಏನಾಗಬಹುದು ಎಂಬದರತ್ತ ಎಲ್ಲರ ಚಿತ್ತ ನೆಟ್ಟಿದೆ.

ಕೋರ್ಟ್ ನಲ್ಲಿ ಇಂದು ಆರೋಪಿ ಪರವಾಗಿ ರಂಗನಾಥ ರೆಡ್ಡಿ ವಾದ ಮಂಡಿಸಿದರು. ಒಂದು ವೇಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆಕ್ಷನ್ 436 ಅಡಿ ಅರ್ಜಿ ಪರಿಗಣಿಸದಿದ್ದರೆ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು. ಹೀಗಾಗಿ ಸಿಆರ್ಪಿಸಿ 439ಸೆಷನ್ಸ್ ಕೋರ್ಟ್ ಪರಿಗಣಿಸಬೇಕು. ಆರೋಪಿಗಳ ವಿರುದ್ಧ ನಾನ್ ಬೇಲಬಲ್ ಸೆಕ್ಷನ್ ಅಡಿ ಆರೋವಿದೆ. ನಿರೀಕ್ಷಣಾ ಜಾಮೀನು ವಿಚಾರದಲ್ಲಿ ಮಾತ್ರ ಸೆ.436 ಅಡಿ ಅಪ್ಲೆ ಆಗುತ್ತದೆ. ಆಗ ಮಾತ್ರ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಬಹುದು. ಆದ್ರೆ ಸೆ.439 ಅಡಿ ರೆಗ್ಯುಲರ್ ಬೇಲ್ ಅನ್ನು ಸೆಷನ್ಸ್ ನೀಡಬಹುದು. ಹೀಗಾಗಿ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿ ಆದೇಶಿಸಬೇಕು ಎಂದು ವಕೀಲ ರಂಗನಾಥ್ ರೆಡ್ಡಿ ಅವರು ಕೋರ್ಟ್ ಗೆ ಮನವಿ ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment