Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಗೆ ಬರ್ತ್ ಡೇ ಸಂಭ್ರಮ : ಸಿನಿಮಾ ಅಪ್ಡೇಟ್ ಏನಿದೆ..?

---Advertisement---

 

ಇಂದು ಕನ್ನಡದ ಲಕ್ಷಾಂತರ ಅಭಿಮಾನಿಗಳ ನೆಚ್ಚಿನ ನಟ ದರ್ಶನ್ ಅವರ ಹುಟ್ಟು ಹಬ್ಬ. ಈ ದಿನಕ್ಕಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದರು. ಪ್ರತಿ ವರ್ಷ ದರ್ಶನ್ ಅವರು ತಮ್ಮ ಮನೆಯ ಬಳಿ ಟೈಟ್ ಸೆಕ್ಯೂರಿಟಿ ವ್ಯವಸ್ಥೆ ಮಾಡಿ, ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದರು. ಆದರೆ ಈ ವರ್ಷ ಬೆನ್ನು ನೋವು ಇದೆ ಜೊತೆಗೆ ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆಯ ಕೆಟ್ಟ ಘಟನೆಯಿಂದ ಹೊರ ಬರಬೇಕಿದೆ. ಹೀಗಾಗಿ ಈ ವರ್ಷ ಅಭಿಮಾನಿಗಳಿಗೂ ಕೈ ಮುಗಿದು ಕೇಳಿಕೊಂಡಿದ್ದರು. ಈ ವರ್ಷ ಕ್ಷಮಿಸಿಬಿಡಿ ಎಂದು.

ಇಂದು ಅಭಿಮಾನಿಗಳು ಮಾತ್ರ ಹುಟ್ಟುಹಬ್ಬವನ್ನು ಆಚರಿಸೋದನ್ನ ನಿಲ್ಲಿಸಿಲ್ಲ. ಬ್ಯಾನರ್ ಕಟ್ಟಿ, ಅನ್ನದಾನ ಮಾಡಿ, ಸಮಾಜ ಸೇವೆಗೆ ಮುಂದಾಗಿದ್ದಾರೆ. ಇದ್ದಲ್ಲಿಯೇ ತಮ್ಮ ಬಾಸ್ ಬರ್ತ್ ಡೇ ಆಚರಿಸುತ್ತಿದ್ದಾರೆ. ಈ ಬಾರಿಯ ದರ್ಶನ್ ಬರ್ತ್ ಡೇಗೆ ವಿಶೇಷ ಏನಂದ್ರೆ ಸಿಕ್ಕಾಪಟ್ಟೆ ಹಾಡುಗಳು ಅವರ ಮೇಲೆ ಹುಟ್ಟಿಕೊಂಡಿವೆ. ಸುಮಾರು ಜನ ಕಲಾವಿದ ಅಭಿಮಾನಿಗಳು ದರ್ಶನ್ ಗೆ ಧೈರ್ಯ ತುಂಬುವಂತಹ ಪದಗಳನ್ನು ಬರೆದು, ಹಾಡು ಕಟ್ಟಿ ಹಾಡಿದ್ದಾರೆ. ಕಳೆದ ಒಂದು ವಾರದಿಂದಾನೇ ಈ ಹಾಡುಗಳು ಹಿಟ್ ಆಗಿವೆ. ಇದೀಗ ಬಹು ನಿರೀಕ್ಷಿತ ಡೆವಿಲ್ ಸಿನಿಮಾ ಅಪ್ಡೇಟ್ ಕೂಡ ಹೊರ ಬಿದ್ದಿದೆ.

ಡೆವಿಲ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ದರ್ಶನ್ ಡೆವಿಲ್ ಅವತಾರದಲ್ಲಿಯೇ ಕಾಣಿಸಿಕೊಂಡಿದ್ದಾರೆ. ಭರ್ಜರಿ ಆಕ್ಷನ್ ಎಂಟರ್ಟೈನ್ಮೆಂಟ್ ಕಾಣಿಸುತ್ತಿದೆ. ಖಡಕ್ ಡೈಲಾಗ್ ಹೇಳುವ ಮೂಲಕ, ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಡೆವಿಲ್ ನಲ್ಲಿ ದರ್ಶನ್ ಅವರ ಉಗ್ರರೂಪ ಕಂಡು ದರ್ಶನ್ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...