Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದರ್ಶನ್ ಬಟ್ಟೆಯನ್ನು FSL ಗೆ ಕಳುಹಿಸಿದ್ದ ಪೊಲೀಸರು : ವರದಿಯಲ್ಲಿ ದೃಢವಾಯ್ತು ಸತ್ಯಸಂಗತಿ..!

---Advertisement---

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದೆ. ದರ್ಶನ್ ಜೈಲು ಪಾಲಾಗಿ ಹತ್ತಿರತ್ತಿರ ಎರಡು ತಿಂಗಳ ಮೇಲಾಗುತ್ತಿದೆ. ಈಗಲೇ ಹೊರಗೆ ಬರುವ ಸೂಚನೆಯೇ ಕಾಣಿಸುತ್ತಿಲ್ಲ. ಯಾಕಂದ್ರೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ತನಕ ಜಾಮೀನು ಸಿಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಹೀಗಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿ ಎಂದೇ ದರ್ಶನ್ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಪೊಲೀಸರು ಮಾತ್ರ ಎಲ್ಲಾ ಆಯಾದಲ್ಲೂ ಹುಡುಕಾಡಿ, ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.

ಪಟ್ಟಣಗೆರೆ ಶೆಡ್ ನಲ್ಲೊಯೇ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು. ರಕ್ತ ಬರುವಂತೆ ಹೊಡೆದಿದ್ದರು. ಅಂದು ದರ್ಶನ್ ಅವರು ಹಾಕಿದ್ದ ಪ್ಯಾಂಟ್ ಮತ್ತು ಶರ್ಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದನ್ನು ಎಫ್ಎಸ್ಎಲ್ ವರದಿಗೆಂದು ಕಳುಹಿಸಿದ್ದರು. ಇದೀಗ ಅದರ ವರದಿ ಬಂದಿದ್ದು, ದರ್ಶನ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ.

ಎಫ್ಎಸ್ಎಲ್ ವರದಿಯಲ್ಲಿ ದರ್ಶನ್ ಹಾಕಿದ್ದ ಶರ್ಟ್ ಮತ್ತು ಪ್ಯಾಂಟ್ ನಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಆ ರಕ್ತದ ಕಲೆಯ ಮಾದರಿ ರೇಣುಕಾಸ್ವಾಮಿ ರಕ್ತವನ್ನು ಹೋಲುತ್ತಿದೆ. ಹೀಗಾಗಿ ಕೊಲೆಯ ವಿಚಾರದಲ್ಲಿ ದರ್ಶನ್ ಅವರು ಭಾಗಿಯಾಗಿದ್ದಾರೆ ಎಂಬುದನ್ನು ಈ ರಕ್ತದ ಕಲೆಗಳು ಸೂಚನೆ ನೀಡುತ್ತಿವೆ. ಪೊಲೀಸರು ಸಲ್ಲಿಕೆ ಮಾಡಬೇಕಾದ ದೋಷಾರೋಪ ಪಟ್ಟಿಯಲ್ಲಿ ಬಟ್ಟೆಯಲ್ಲಿ ರಕ್ತದ ಮಾದರಿ ಪತ್ತೆಯಾಗಿದ್ದನ್ನು ಉಲ್ಲೇಖ ಮಾಡಲಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಇನ್ನು ಸಮಯ ಇರುವ ಕಾರಣ, ಸರಿಯಾಗಿ ತನಿಖೆ ನಡೆಸಿ, ಎಲ್ಲಾ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...