Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ : ಟೀ ಶರ್ಟ್.. ಗ್ಲಾಸ್ ನಿಂದ ಮತ್ತೆ ವಿವಾದ..!

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್ ಗೆ ಒಂದೇ ಒಂದು ಸಿಗರೇಟ್ ನಿಂದ ಕಂಟಕ ಎದುರಾಯ್ತು. ಅಂದು ವಿಲ್ಸನ್ ಗಾರ್ಡ್ ನಾಗನ ಜೊತೆಗೆ ಕೂತು ಸಿಗರೇಟ್ ಸೇದಿರಲಿಲ್ಲ ಎಂದಿದ್ದರೆ ಪರಪ್ಪನ ಅಗ್ರಹಾರದಲ್ಲಿಯೇ ಇರುತ್ತಿದ್ದರು. ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ.

ಪರಪ್ಪನ ಅಗ್ರಹಾರದಿಂದ ಇಂದು ಬೆಳಗ್ಗೆ 9.45ಕ್ಕೆ ಬಳ್ಳಾರಿ ತಲುಪಿದ್ದಾರೆ. ಬಳ್ಳಾರಿ ಜೈಲಿನ ಒಳಗೆ ಹೋಗಿದ್ದು, ಈಗ ಕೈದಿ ನಂಬರ್ ಕೂಡ ಬದಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ದರ್ಶನ್ ಅವರಿಗೆ 6106 ಕೈದಿ ನಂಬರ್ ನೀಡಲಾಗಿತ್ತು. ಆದರೆ ಬಳ್ಳಾರಿಗೆ ಶಿಫ್ಟ್ ಮಾಡಿದ ಮೇಲೆ ಆ ನಂಬರ್ ಬದಲಾಗಿದೆ‌. 511 ನಂಬರ್ ಅನ್ನು ನೀಡಲಾಗಿದೆ. ಈ ಹಿಂದೆ 6106 ಕೈದಿ ನಂಬರ್ ಅನ್ನು ಅಭಿಮಾನಿಗಳು ಎಲ್ಲಾ ಕಡೆ ಹಾಕಿಸಿಕೊಂಡಿದ್ದರು. ಈಗ ಕೈದಿ ನಂಬರ್ ಬದಲಾಗಿದೆ.

ಇನ್ನು ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವಾಗಲೂ ವಿವಾದ ಹುಟ್ಟು ಹಾಕಿಕೊಂಡಿದ್ದಾರೆ. ಹಾಕಿದ್ದ ಪೂಮಾ ಟೀ ಶರ್ಟ್, ಸನ್ ಗ್ಲಾಸ್, ಬ್ರಾಂಡೆಡ್ ಜೀನ್ಸ್ ಎಲ್ಲವೂ ಚರ್ಚೆಗೆ ಗ್ರಾಸವಾಗಿದೆ. ಆದರೆ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿರುವುದರಿಂದ ಅವರ ಕುಟುಂಬಸ್ಥರಿಗೇನೆ ತೊಂದರೆಯಾಗಲಿದೆ. ಪರಪ್ಪನ ಅಗ್ರಹಾರ ಬೆಂಗಳೂರಿನಲ್ಲಿಯೇ ಇದ್ದಿದ್ದರಿಂದ ಆಗಾಗ ದರ್ಶನ್ ಅವರನ್ನು ನೋಡಿಕೊಂಡು ಬರಲು ಹೋಗುತ್ತಿದ್ದರು. ದರ್ಶನ್ ಅವರ ಸ್ನೇಹಿತರು ಕೂಡ ವಾರಕ್ಕೆ ಎರಡ್ಮೂರು ಮಂದಿ ಆದ್ರೂ ಭೇಟಿ ನೀಡುತ್ತಿದ್ದರು. ಆದರೀಗ ಬಳ್ಳಾರಿ ದೂರವಾಗುವ ಕಾರಣ, ಭೇಟಿಗೆ ಹೋಗುವುದಕ್ಕೆ ಕಷ್ಟ. ಫ್ಯಾಮಿಲಿಯವರು ಕೂಡ ಭೇಟಿಯನ್ನು ಕಡಿಮೆ ಮಾಡಲಿದ್ದಾರೆ. ಇದು ದರ್ಶನ್ ಅವರ ಕುಟುಂಬಕ್ಕೆ ನಷ್ಟವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!