ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ದಾಸೋಹ ದಿನಾಚರಣೆ

 

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಜ.21): ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿರವರು ಲಿಂಗೈಕ್ಯರಾದ ಜ.21 ನೇ ದಿನವನ್ನು ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ದಾಸೋಹ ದಿನವನ್ನಾಗಿ ಆಚರಿಸಲಾಯಿತು.

ನಗರದ ಗಾರೆಹಟ್ಟಿಯಲ್ಲಿರುವ ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆ ಕಚೇರಿಯಲ್ಲಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿರವರ ಫೋಟೋಗೆ ಪುಷ್ಪನಮನ ಸಲ್ಲಿಸಿ ಶುಕ್ರವಾರ ಪೂಜೆ ನೆರವೇರಿಸಲಾಯಿತು.

ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ಮಾತನಾಡಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೆ ನಾಡಿನಾದ್ಯಂತ ಹೆಸರುವಾಸಿಯಾಗಿ ಲಕ್ಷಾಂತರ ಬಡ ಮಕ್ಕಳಿಗೆ ಶಿಕ್ಷಣ ಹಾಗೂ ಅನ್ನದಾಸೋಹ ನೀಡಿ ಲಕ್ಷಾಂತರ ಭಕ್ತರ ಮನದಲ್ಲಿ ಇಂದಿಗೂ ಮರೆಯಾಗದೆ ಉಳಿದಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ ಲಿಂಗೈಕ್ಯ ದಿನವನ್ನು ಅನ್ನ ದಾಸೋಹ ದಿನವನ್ನಾಗಿ ಆಚರಿಸಿ ಪ್ರತಿಯೊಬ್ಬರು ಸ್ವಾಮೀಜಿಗಳು ಬಿಟ್ಟು ಹೋಗಿರುವ ಮಾರ್ಗದರ್ಶನ, ಆದರ್ಶದಂತೆ ನಡೆಯಬೇಕಿದೆ ಎಂದು ಹೇಳಿದರು.

ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಗೌರವಾಧ್ಕಕ್ಷ ಕೆ.ಸಿ.ಗಂಗಾಧರಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌ಸ್ವಾಮಿ, ತಾಲ್ಲೂಕು ಅಧ್ಯಕ್ಷ ಪ್ರಶಾಂತ್‌ರೆಡ್ಡಿ, ನಗರಾಧ್ಯಕ್ಷ ಶಿವರಾಜ್ ಜಾಲಿಕಟ್ಟೆ, ತಿಪ್ಪೇಸ್ವಾಮಿ ಎಸ್, ಕರಿಬಸವಯ್ಯ, ವೀರೇಶ್, ವಿಜಯಕುಮಾರ್, ಮನು ತಮಟಕಲ್ಲು, ಅನಿಲ್ ಚಿಕ್ಕಂದವಾಡಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಅನ್ನದಾಸೋಹ ದಿನದ ಅಂಗವಾಗಿ ಸುತ್ತಮುತ್ತಲಿನವರಿಗೆ ಪ್ರಸಾದ ವಿನಿಯೋಗಿಸಲಾಯಿತು.

suddionenews

Recent Posts

ರಾಜ್ಯ ಬಜೆಟ್ ಗೆ ಸಿದ್ದತೆ : ಮದುವೆ ಮನೆಯಿಂದ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಡಿಕೆಶಿ

ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…

1 minute ago

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

13 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

19 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

26 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

33 minutes ago