ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿಕ್ಕಮಗಳೂರು: 2017ರಲ್ಲಿ ದತ್ತಪೀಠದಲ್ಲಿ ಏನು ಘಟನೆ ನಡೆದಿತ್ತು. ಆ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸನ್ನು ಬಿಜೆಪಿ ಸರ್ಕಾರ ವಾಪಾಸ್ ಪಡೆದಿತ್ತು. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ನೋಟೀಸ್ ಬಂದಿದೆ. ಈ ಸಂಬಂಧ ಸಿಟಿ ರವಿ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ. ಹಿಂದೂಗಳನ್ನು ಜಾತಿ ಜಾತಿಯಾಗಿ ಒಡೆಯುವುದು, ಮುಸ್ಲಿಮರನ್ನು ಒಲೈಸಿಕೊಳ್ಳುವುದನ್ನು ಮಾಡುತ್ತಾ ಬರುತ್ತಿದೆ. ಸಂಘಟನೆಯನ್ನು ತುಳಿಯುವ ಉದ್ದೇಶದಿಂದ ಕೇಸನ್ನು ರೀಒಪನ್ ಮಾಡಲಾಗುತ್ತಿದೆ ಎಂದು ಸಿಟಿ ರವಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಯೋಜನಾ ಬದ್ಧವಾಗಿಯೇ ಸಂಘಟನೆಗಳನ್ನು ಮಣಿಸುತ್ತಾ ಇದ್ದಾರೆ. ನಾವೂ ಎಂದಿಗೂ ಎದೆ ಗುಂದುವುದಿಲ್ಲ. ಹೋರಾಟ ಮಾಡುತ್ತೇವೆ. ದತ್ತ ಪೀಠ ಹೋರಾಟಗಾರರ ಮೇಲಿನ ಕೇಸನ್ನು ರೀ ಓಪನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿಯಾಗಿ ಕೇಸನ್ನು ಒಪನ್ ಮಾಡಿರುವುದು ಬಿಡಿಬಿಡಿ ಅಂತ ನನಗೆ ಅನ್ನಿಸ್ತಾ ಇಲ್ಲ. ಇವರು ಒಂದು ಯೋಜನೆ ಮಾಡಿದ್ದಾರೆ. ಆ ಯೋಜನೆಗೆ ಒಂದು ಸಂಸ್ಥೆಯನ್ನು ತೆಗೆದುಕೊಂಡು, ಆ ಮೂಲಕ ವರ್ಷಕ್ಕೆ 14-15 ಕೋಟಿ ಹಣ ನೀಡುತ್ತಿದ್ದಾರಂತೆ.
ಅವರ ಕೆಲಸ ಏನು ಎಂದರೆ ಸರ್ಕಾರದ ವಿರುದ್ಧ ಏನಾದರೂ ಕೆಲಸ ಬಂದರೆ ಅದನ್ನು ಡೈವರ್ಟ್ ಮಾಡುವುದು. ಹಿಂದೂ ಸಂಘಟನೆಗಳು ಕೆಲಸ ಮಾಡದಂತೆ ನೋಡಿಕೊಳ್ಳುವುದು. ಹಿಂದೂ ಸಂಘಟನೆಗಳನ್ನು ತಿಳಿಯುವುದಕ್ಕೆ ಈ ರೀತಿ ಒಂದು ಕ್ರಿಯೇಟ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಹಿಂದೆ ದಿನೇಶ್ ಅಮಿನ್ ಮಟ್ಟು ಅಂತ ಪತ್ರಕರ್ತರಿದ್ದಲ್ಲ ಅವರ ನೇತೃತ್ವದಲ್ಲಿಯೇ ಹರ್ಬಲ್ ನಕ್ಸಲರ ಆರ್ಗನೈಸರ್ ಮಾಡಿದ್ದಾರಂತೆ. ಅವರ ಕೆಲಸ ಸೋಷಿಯಲ್ ಮೀಡಿಯಾದಲ್ಲಿ ಯಾರು ಸಕ್ರೀಯವಾಗಿದ್ದಾರೆ. ಮೀಡಿಯಾದಲ್ಲಿ, ಸಾರ್ವಜನಿಕವಾಗಿ ಯಾರು ಸಕ್ರೀಯವಾಗಿದ್ದಾರೆ. ಅದನ್ನು ತುಳಿಯುವುದೇ ಅವರ ಕೆಲಸವಾಗಿದೆಯಂತೆ. ಇದನ್ನ ಕೇಳಿದ್ದೇವೆ. ನಾವೇನು ಹೆದರಿಕೊಂಡು ಕುಳಿತಿಲ್ಲ. ಎಲ್ಲವನ್ನು ಹೆದರಿಸುತ್ತೇವೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್