ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಶ್ರಾವಣ ಮಾಸ ಶುರುವಾಯ್ತು ಎಂದರೆ ಸಾಲು ಸಾಲು ಹಬ್ಬಗಳು ಬರುತ್ತಾ ಇರುತ್ತವೆ. ಹೀಗಾಗಿ ಬಾಳೆ ಹಣ್ಣಿಗೆ ಬೇಡಿಕೆ ಜಾಸ್ತಿಯಾಗಿದೆ. ಅದರಲ್ಲೂ ಏಲಕ್ಕಿ ಬಾಳೆಗೆ ಹೆಚ್ಚಿನ ಬೇಡಿಕೆ ಇದೆ. ಸದ್ಯ ಮಾರುಕಟ್ಟೆಯಲ್ಲಿ ಏಲಕ್ಕಿ ಬಾಳೆ ಹಣ್ಣಿನ ಬೆಲೆ 130 ರೂಪಾಯಿಗೆ ತಲುಪಿದೆ. ಪಚ್ಚ ಬಾಳೆ ಹಣ್ಣು 80 ರೂಪಾಯಿಗೆ ತಲುಪಿದೆ. ಇದು ರೈತರ ಮೊಗದಲ್ಲಿ ಸಂತಸವನ್ನು ತಂದಿದೆ.
ಅದರಲ್ಲೂ ದಾವಣಗೆರೆ ಭಾಗದಲ್ಲಿಯೇ ಏಲಕ್ಕಿ ಬೆಳೆಗಾರರು ಹೆಚ್ಚಾಗಿದ್ದಾರೆ. ಸಾಲು ಸಾಲು ಹಬ್ಬಗಳು ಇರುವ ಕಾರಣ ದೇವರಿಗೆ ಏಲಕ್ಕಿ ಬಾಳೆ ಹಣ್ಣನ್ನೇ ಪೂಜೆಗಾಗಿ ಬಳಸುವುದು. ಪಚ್ಚ ಬಾಳೆ ಹಣ್ಣು ಆಂಧ್ರಪ್ರದೇಶ ಹಾಗೂ ತೆಲಂಗಾಣ ಭಾಗದಿಂದ ಬರುತ್ತವೆ. ಗ್ರಾಹಕರಿಗೆ ಹಣ್ಣಿನ ದರ ಕೇಳಿನೆ ಶಾಕ್ ಆಗುತ್ತಿದೆ. ಮಧ್ಯಮವರ್ಗದವರಿಗೆ ಬರೀ ಒಂದು ಕೆಜಿಗೆ 130 ರೂಪಾಯಿ ಕೊಟ್ಟು ತೆಗೆದುಕೊಳ್ಳುವುದು ಸುಲಭದ ಮಾತಲ್ಲ. ಹೀಗಾಗಿ ಮಧ್ಯಮವರ್ಗದ ಗ್ರಾಹಕರು ಪಚ್ಚೆ ಬಾಳೆ ಹಣ್ಣಿನ ಮೊರೆ ಹೋಗಿದ್ದಾರೆ. ಆದರೆ ಇದು ರೈತರಿಗೆ ಖುಷಿ ತಂದಿದೆ. ರೈತರಿಗೂ ಸಿಗುವುದು ಅಲ್ಪಸ್ವಲ್ಪ ಆದ್ರೆ ಬೆಲೆ ಏರಿಕೆ ಮಧ್ಯವರ್ತಿಗಳಿಗೇನೆ ಹೆಚ್ಚು ಸಂತಸ ತಂದಿರೋದು.
ಬಹುತೇಕ ವ್ಯಾಪಾರಿಗಳು ಹಸಿ ಬಾಳೇ ಗೊನೆಯನ್ನೇ ಖರೀದಿ ಮಾಡಿಬಿಡುತ್ತಾರೆ. ಗೋಧಾಮಿನಲ್ಲಿ ಎರಡ್ಮೂರು ದಿನ ಶೇಖರಿಸಿಟ್ಟು ಹಣ್ಣಾದ ಮೇಲೆ ಮಾರುಕಟ್ಟೆಗೆ ತರುತ್ತಾರೆ. ಹೀಗಾಗಿ ರೈತರಿಗೆ ಕೊಟ್ಟದ್ದು ಸಣ್ಣ ಅಮೌಂಟ್ ಆದರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದು, ಅವರಿಗೆ ಲಾಭವಾಗುವ ದರವಾಗಿರುತ್ತದೆ. ಪ್ರಸ್ತುತ ಇಳುವರಿ ಕೂಡ ಶೇಕಡ 50 ರಷ್ಟು ಕುಸಿತವಾಗಿದೆ. ಮಳೆ ಹೆಚ್ಚಾಗಿ ಬರುತ್ತಿರುವ ಕಾರಣ ಬಾಳೆ ಬೆಳೆ ನಾಶವಾಗುತ್ತಿದೆ. ಇದು ರೈತರಿಗೆ ಇನ್ನಷ್ಟು ನಷ್ಟ ಉಂಟು ಮಾಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್