Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ರೈತರಿಗೆ ಖುಷಿ : ಏಲಕ್ಕಿ ಬಾಳೆಗೆ ಬಂಪರ್ ಬೆಲೆ..!

Facebook
Twitter
Telegram
WhatsApp

ದಾವಣಗೆರೆ: ಶ್ರಾವಣ ಮಾಸ ಶುರುವಾಯ್ತು ಎಂದರೆ ಸಾಲು ಸಾಲು ಹಬ್ಬಗಳು ಬರುತ್ತಾ ಇರುತ್ತವೆ. ಹೀಗಾಗಿ ಬಾಳೆ ಹಣ್ಣಿಗೆ ಬೇಡಿಕೆ ಜಾಸ್ತಿಯಾಗಿದೆ. ಅದರಲ್ಲೂ ಏಲಕ್ಕಿ ಬಾಳೆಗೆ ಹೆಚ್ಚಿನ ಬೇಡಿಕೆ ಇದೆ. ಸದ್ಯ ಮಾರುಕಟ್ಟೆಯಲ್ಲಿ ಏಲಕ್ಕಿ ಬಾಳೆ ಹಣ್ಣಿನ ಬೆಲೆ 130 ರೂಪಾಯಿಗೆ ತಲುಪಿದೆ. ಪಚ್ಚ ಬಾಳೆ ಹಣ್ಣು 80 ರೂಪಾಯಿಗೆ ತಲುಪಿದೆ. ಇದು ರೈತರ ಮೊಗದಲ್ಲಿ ಸಂತಸವನ್ನು ತಂದಿದೆ.

ಅದರಲ್ಲೂ ದಾವಣಗೆರೆ ಭಾಗದಲ್ಲಿಯೇ ಏಲಕ್ಕಿ ಬೆಳೆಗಾರರು ಹೆಚ್ಚಾಗಿದ್ದಾರೆ. ಸಾಲು ಸಾಲು ಹಬ್ಬಗಳು ಇರುವ ಕಾರಣ ದೇವರಿಗೆ ಏಲಕ್ಕಿ ಬಾಳೆ ಹಣ್ಣನ್ನೇ ಪೂಜೆಗಾಗಿ ಬಳಸುವುದು. ಪಚ್ಚ ಬಾಳೆ ಹಣ್ಣು ಆಂಧ್ರಪ್ರದೇಶ ಹಾಗೂ ತೆಲಂಗಾಣ ಭಾಗದಿಂದ ಬರುತ್ತವೆ. ಗ್ರಾಹಕರಿಗೆ ಹಣ್ಣಿನ ದರ ಕೇಳಿನೆ ಶಾಕ್ ಆಗುತ್ತಿದೆ. ಮಧ್ಯಮವರ್ಗದವರಿಗೆ ಬರೀ ಒಂದು ಕೆಜಿಗೆ 130 ರೂಪಾಯಿ ಕೊಟ್ಟು ತೆಗೆದುಕೊಳ್ಳುವುದು ಸುಲಭದ ಮಾತಲ್ಲ. ಹೀಗಾಗಿ ಮಧ್ಯಮವರ್ಗದ ಗ್ರಾಹಕರು ಪಚ್ಚೆ ಬಾಳೆ ಹಣ್ಣಿನ ಮೊರೆ ಹೋಗಿದ್ದಾರೆ. ಆದರೆ ಇದು ರೈತರಿಗೆ ಖುಷಿ ತಂದಿದೆ. ರೈತರಿಗೂ ಸಿಗುವುದು ಅಲ್ಪಸ್ವಲ್ಪ ಆದ್ರೆ ಬೆಲೆ ಏರಿಕೆ ಮಧ್ಯವರ್ತಿಗಳಿಗೇನೆ ಹೆಚ್ಚು ಸಂತಸ ತಂದಿರೋದು.

ಬಹುತೇಕ ವ್ಯಾಪಾರಿಗಳು ಹಸಿ ಬಾಳೇ ಗೊನೆಯನ್ನೇ ಖರೀದಿ ಮಾಡಿಬಿಡುತ್ತಾರೆ. ಗೋಧಾಮಿನಲ್ಲಿ ಎರಡ್ಮೂರು ದಿನ ಶೇಖರಿಸಿಟ್ಟು ಹಣ್ಣಾದ ಮೇಲೆ ಮಾರುಕಟ್ಟೆಗೆ ತರುತ್ತಾರೆ. ಹೀಗಾಗಿ ರೈತರಿಗೆ ಕೊಟ್ಟದ್ದು ಸಣ್ಣ ಅಮೌಂಟ್ ಆದರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದು, ಅವರಿಗೆ ಲಾಭವಾಗುವ ದರವಾಗಿರುತ್ತದೆ. ಪ್ರಸ್ತುತ ಇಳುವರಿ ಕೂಡ ಶೇಕಡ 50 ರಷ್ಟು ಕುಸಿತವಾಗಿದೆ. ಮಳೆ ಹೆಚ್ಚಾಗಿ ಬರುತ್ತಿರುವ ಕಾರಣ ಬಾಳೆ ಬೆಳೆ ನಾಶವಾಗುತ್ತಿದೆ. ಇದು ರೈತರಿಗೆ ಇನ್ನಷ್ಟು ನಷ್ಟ ಉಂಟು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!