ದಾವಣಗೆರೆ ಎಸ್ಪಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.ಈ ಕುರಿತು ಸಂಜಯ್ ಬಿ.ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-4) ಆದೇಶವನ್ನು ಹೊರಡಿಸಿದ್ದಾರೆ.
ಉಮಾ ಪ್ರಶಾಂತ್ ಆಗಸ್ಟ್ 2022ರ ಬಳಿಕ ದಾವಣಗೆರೆ ಎಸ್ಪಿಯಾಗಿ ಅಧಿಕಾರವಹಿಸಿಕೊಂಡರು. ಅದಕ್ಕೂ ಮೊದಲು ಅವರು ಚಿಕ್ಕಮಗಳೂರು ಎಸ್ಪಿಯಾಗಿದ್ದರು. ಚಿಕ್ಕಮಗಳೂರಿನ ಮೊದಲ ಮಹಿಳಾ ಎಸ್ಪಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಅವರು ಮಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ACB) ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿಯೂ ಸೇವೆ ಸಲ್ಲಿಸಿದ್ದರು.
ದಾವಣಗೆರೆಯ ನೂತನ ಎಸ್ಪಿಯಾಗಿ ಶೇಖರ್ ಹೆಚ್.ತೆಕ್ಕಣ್ಣವರ್ (ಕೆಎನ್;2014) ನೇಮಕ ಮಾಡಲಾಗಿದೆ. ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಅವರನ್ನು ದಾವಣಗೆರೆ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಗುಪ್ತಚರ ವಿಭಾಗ, ಬೆಂಗಳೂರು ಎಸ್ಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.


