Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಆರೋಪ : ದಾವಣಗೆರೆ ವಿವಿ ಪ್ರೊಫೆಸರ್ ಅರೆಸ್ಟ್..!

---Advertisement---

ದಾವಣಗೆರೆ: ಈಗಂತೂ ಲಂಚದ ಹಿಂದೆ ಸಾಕಷ್ಟು ಅಧಿಕಾರಿಗಳು ಬಿದ್ದಿದ್ದಾರೆ. ಯಾವೂ ಮಾಡುವ ಹುದ್ದೆಯಲ್ಲಿ ಎಲ್ಲೆಲ್ಲಿ ಲಂಚ ಸ್ವೀಕಾರ ಮಾಡುವುದಕ್ಕೆ ಅವಕಾಶವಿದೆಯೋ ಅಲ್ಲೆಲ್ಲಾ ಡಿಮ್ಯಾಂಡ್ ಇಟ್ಟು ಹಣ ವಸೂಲಿ ಮಾಡುತ್ತಾರೆ. ಅದು ಶಿಕ್ಷಣ ಸಂಸ್ಥೆಯಾದರೂ ಸರಿ, ಸರ್ಟಿಫಿಕೇಟ್ ಕೊಡುವ ವಿಚಾರದಲ್ಲಾದರೂ ಸರಿ. ಇದೆಲ್ಲಾ ಹೇಳಿದ್ಯಾಕೆ ಅಂದ್ರೆ ದಾವಣಗೆರೆ ವಿವಿಯ ಪ್ರೊಫೆಸರ್ ಗಾಯತ್ರಿ ದೇವರಾಜ್ ಅವರನ್ನ ಸಿಬಿಐ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದುಲಂಚಕ್ಕೆ ಬೇಡಿಕೆ ಇಟ್ಟಿರೋ ಆರೋಪದ ಮೇಲೆ.

ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊಫೆಸರ್ ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದೆ. ಈ ಹಿಂದೆ ವಿಶ್ವವಿದ್ಯಾಲಯದ ಕುಲಸಚಿವೆಯೂ ಆಗಿ ಕಾರ್ಯನಿರ್ವಹಿಸಿದ್ದ ಅವರ ಮನೆಗೂ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದಕ್ಕೂ ಮೊದಲು ಸಿಬಿಐ ಅಧಿಕಾರಿಗಳು ವಿಶ್ವವಿದ್ಯಾಲಯದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಂತ ಆರೋಪ ಗಾಯತ್ರಿ ಮೇಲಿದೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ತಪಾಸಣೆ ಕೂಡ ನಡೆಸುತ್ತಿದ್ದಾರೆ.

ತಪಾಸಣೆ ನಡೆಸಿದ ಸಿಬಿಐ ಅಧಿಕಾರಿಗಳು 37 ಲಕ್ಷ ನಗದು, 6 ಲ್ಯಾಪ್‌ಟಾಪ್, ಐಫೋನ್ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಕೆಎಲ್ಇಎಫ್ ವಿಶ್ವ ವಿದ್ಯಾಲಯದ ನ್ಯಾಕ್ ಕಮಿಟಿ ಪರಿಶೀಲನೆ ವೇಳೆ ಲಂಚ ಪಡೆಯುವಾಗ ಮಹಿಳಾ ಪ್ರೊಫೆಸರ್ ಅನ್ನು ಬಂಧಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಶೋಧ ನಡೆಸಿರುವುದು ಗೊತ್ತಿಲ್ಲ, ಗಾಯತ್ರಿ ಅವರನ್ನು ಬಂಧಿಸಿರುವುದು ನಮಗೆ ಗೊತ್ತಿಲ್ಲ ಅಂತ ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅವರು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...