ದಾವಣಗೆರೆ ಬಡಾವಣೆ ಪೊಲೀಸರಿಂದ ಕೆ ಎಸ್ ಈಶ್ವರಪ್ಪಗೆ ನೋಟೋಸ್ ಜಾರಿ..!

1 Min Read

ದಾವಣಗೆರೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇತ್ತಿಚೆಗೆ ಕಾಂಗ್ರೆಸ್ ನಾಯಕರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಆ ಹೇಳಿಕೆಗೆ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.

ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅಂತವರನ್ನು ಗುಂಡಿಟ್ಟು ಕೊಲ್ಲಬೇಕೆಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರಂ ನಗರದಲ್ಲಿರುವ ಕೆ ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಪೊಲೀಸರು, ನೋಟೀಸ್ ಜಾರಿ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಕೂಡ ನೋಟೀಸ್ ತೆಗೆದುಕೊಂಡಿದ್ದಾರೆ.

 

19/2024 ಅಪರಾಧ ಸಂಖ್ಯೆಗೆ ಸಂಬಂಧಿಸಿದಂತೆ ನೋಟೀಸ್ ಜಾರಿಯಾಗಿದೆ. ಈ ನೋಟೀಸ್ ನಲ್ಲಿ ಫೆಬ್ರವರಿ 15ರಂದು ಬೆಳಗ್ಗೆ 10.30ಕ್ಕೆ ಠಾಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ. ಪ್ರಕರಣದ ಕೆಲಸವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಬೇಕಿದೆ. ಪ್ರಕರಣದಲ್ಲಿ ವಿಚಾರಣೆ ಮಾಡಲು ಸಾಕಷ್ಟು ಪೂರಕ ಕಾರಣಗಳು ಕಂಡು ಬಂದಿದೆ ಎಂದು ನೋಟೀಸ್ ಜಾರಿ‌ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *