Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ : ನಿರುದ್ಯೋಗಿ ಯುವಕ, ಯುವತಿಯರು ಭಾಗಿಯಾಗಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ

---Advertisement---

ದಾವಣಗೆರೆ : ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ : ನಿರುದ್ಯೋಗಿ ಯುವಕ, ಯುವತಿಯರು ಭಾಗಿಯಾಗಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ,ಮಾರ್ಚ್.04 : ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದ್ದು ಜಿಲ್ಲೆಯ ಯುವಕ, ಯುವತಿಯರು ಇದರ ಲಾಭ ಪಡೆಯಬೇಕೆಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

 

ಉದ್ಯೋಗ ಮೇಳದ ಪೋಸ್ಟರ್‍ನ್ನು ಮಂಗಳವಾರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ. ದಾವಣಗೆರೆ ನಗರ ಜವಳಿ ಕ್ಷೇತ್ರದಲ್ಲಿ ಪ್ರಸಿದ್ದಿಯನ್ನು ಪಡೆಯುವ ಮೂಲಕ ಮ್ಯಾಚೇಸ್ಟರ್ ಎಂದೇ ಹೆಸರು ಗಳಿಸಿತ್ತು. ಈಗ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಪಡೆದಿದೆ. ದಾವಣಗೆರೆ ಐಟಿಐನಿಂದ ಡಿಪ್ಲೊಮಾ, ಇಂಜಿನಿಯರಿಂಗ್, ಮೆಡಿಕಲ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಹೊಂದಿದೆ. ಜೊತೆಗೆ ಕೃಷಿಯಲ್ಲಿಯು ಜಿಲ್ಲೆ ಸಾಕಷ್ಟು ಅಭಿವೃದ್ದಿ ಹೊಂದಿದೆ.
ಉನ್ನತ ಶಿಕ್ಷಣ ಪಡೆದವರು ಉದ್ಯೋಗಕ್ಕಾಗಿ ಹೊರ ದೇಶಗಳಿಗೆ ಹೋಗಲಿದ್ದು ಇಲ್ಲಿನ ಮಾನವ ಸಂಪನ್ಮೂಲ ಬೇರೆ ಕಡೆ ಬಳಕೆಯಾಗುವ ಬದಲು ಇಲ್ಲಿಯೇ ಬಳಕೆಯಾಗುವುದರಿಂದ ಇನ್ನಷ್ಟು ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಇಂತಹ ಬೃಹತ್ ಉದ್ಯೋಗ ಮೇಳಗಳ ಮೂಲಕ ಜಿಲ್ಲೆಯ ಯುವಕ, ಯುವತಿಯರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ರೇಷ್ಮ ಕೌಸರ್, ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment