ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಹಿನ್ನೆಲೆ ಮುಸ್ಲಿಂ ಸಮುದಾಯದ ಅಸಮಾಧಾನ ತೀವ್ರಗೊಂಡಿದ್ದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, 2028ರ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಮುಂದೆ ಮನವಿ ಮಾಡಲಾಗಿದೆ. ಈ ಬೇಡಿಕೆಗೆ ಸ್ಪಂದಿಸಿದ ಹೈಕಮಾಂಡ್, ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಪರಿಗಣಿಸುವುದಾಗಿ ಭರವಸೆ ನೀಡಿದೆ ಎಂದರು. ಈ ವಿಚಾರದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ ಅವರ ಸಮ್ಮುಖದಲ್ಲಿಯೇ ಚರ್ಚೆ ನಡೆದಿದ್ದು, ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದರು.
ಪಕ್ಷದಲ್ಲಿ ಲಕ್ಷಾಂತರ ಕಾರ್ಯಕರ್ತರು ಇದ್ದು, ಕೆಲವರು ಭಾವನಾತ್ಮಕವಾಗಿ ಘೋಷಣೆ ಕೂಗುವುದು ಸಹಜ ಎಂದು ತಿಳಿಸಿದ ಅವರು, ಕಾಂಗ್ರೆಸ್ ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಅವಲಂಬಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಎಸ್.ಎಸ್. ಮಲ್ಲಿಕಾರ್ಜುನ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಅವರು ತಮ್ಮ ಆತ್ಮೀಯ ಸ್ನೇಹಿತರಾಗಿದ್ದಾರೆ ಎಂದು ಹೇಳಿದರು.
ಚುನಾವಣಾ ಪ್ರಚಾರಕ್ಕೆ ಬರಲು ಮಲ್ಲಿಕಾರ್ಜುನ ಅವರು ಕರೆ ಮಾಡಿದ್ದು, ತಾವು ಸಹ ಭಾಗವಹಿಸುವುದಾಗಿ ಜಮೀರ್ ತಿಳಿಸಿದ್ದಾರೆ. ಜೊತೆಗೆ, ಪಕ್ಷದ ನೀತಿಯ ಪ್ರಕಾರ ಶಾಸಕರ ಕುಟುಂಬಗಳಿಗೆ ಟಿಕೆಟ್ ನೀಡುವ ಪರಿಪಾಠವಿದ್ದು, ಅದೇ ಆಧಾರದ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ ಎಂದು ವಿವರಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









