Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗ ಪರಿಶೀಲನೆ: ಇಡೇರುತ್ತಾ ಬಹುವರ್ಷದ ಕನಸು?

---Advertisement---

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗವು ಮಧ್ಯ ಕರ್ನಾಟಕದ ಜನರ ಬಹುಕಾಲದ ಕನಸು. ಈ ಯೋಜನೆ ಪೂರ್ಣಗೊಂಡರೆ ಬೆಂಗಳೂರು-ದಾವಣಗೆರೆ ನಡುವಿನ ಅಂತರ ಕಡಿಮೆ ಆಗಲಿದೆ. ರೈಲುಗಳು ಅರಸೀಕೆರೆ ಮೂಲಕ ಸಾಗುವುದು ತಪ್ಪಲಿದ್ದು, ಪ್ರಯಾಣದ ಸಮಯ ಉಳಿತಾಯ ಆಗಲಿದೆ.

ದಾವಣಗೆರೆ-ಚಿತ್ರದುರ್ಗ-ತುಮಕೂರು ನಡುವೆ ನಿರ್ಮಾಣ ಆಗುತ್ತಿರುವ ನೇರ ರೈಲು ಮಾರ್ಗವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ಪರಿಶೀಲನೆ ನಡೆಸಿದ್ದಾರೆ. ವಿಶೇಷ ರೈಲಿನಲ್ಲಿ ಬೆಂಗಳೂರಿನಂದ ದಾವಣಗೆರೆಗೆ ಬಂದ ಅವರು ತಾಲ್ಲೂಕಿನ ತೋಳಹುಣಸೆ ರೈಲು ನಿಲ್ದಾಣದಿಂದ ಪರಿಶೀಲನೆ ಆರಂಭಿಸಿದರು.

ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಗ್ರಾಮದ ವರೆಗೆ ಪೂರ್ಣಗೊಂಡಿದೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಅಲ್ಲಲ್ಲಿ ರೈಲು ಹಳಿ ಅಳವಡಿಕೆ ಮಾಡಲಾಗಿದೆ. ದಾವಣಗೆರೆಯಿಂದ ಆರಂಭವಾದ ರೈಲು ಮಾರ್ಗದ ಪರಿಶೀಲನೆ ತುಮಕೂರಿನವರೆಗೆ ನಡೆಯಲಿದೆ.

ಬ್ಯಾಟರಿ ಚಾಲಿತ ಮೋಟಾರು ಟ್ರಾಲಿಯಲ್ಲಿ ರೈಲು ಹಳಿಯ ಮೇಲೆ ಸಾಗಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಜೊತೆಗೆ ಇದ್ದರು.ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಇದ್ದರು‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now