Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ :  ಶೀಘ್ರ ಭೂಮಿ ಪೂಜೆ ಕೈಗೊಳ್ಳಲು ಭೂಸ್ವಾಧೀನ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ : ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ, (ಸೆ. 05): ದಾವಣಗೆರೆ-ಚಿತ್ರದುರ್ಗ-ತುಮಕೂರು ಹೊಸ ನೇರ ರೈಲ್ವೆ ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ಮೂರೂ ಜಿಲ್ಲೆಗಳಲ್ಲಿ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ, ಯೋಜನೆಗೆ ಶೀಘ್ರವೇ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರು ಮೂರು ಜಿಲ್ಲೆಗಳ ವಿಶೇಷ ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು.

 


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ-ತುಮಕೂರು ಹೊಸ ನೇರ ರೈಲ್ವೆ ಮಾರ್ಗ ಕುರಿತು ಸೋಮವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು

ದಾವಣಗೆರೆ ಜಿಲ್ಲೆಯ ತೋಳಹುಣಸೆಯಿಂದ ಯೋಜನೆಯ ಮಾರ್ಗ ಪ್ರಾರಂಭವಾಗಲಿದ್ದು, ಇಲ್ಲಿಂದ ಚಿತ್ರದುರ್ಗ ಜಿಲ್ಲೆಯ ನೀರ್ಥಡಿ ವರೆಗೆ ಒಟ್ಟು 32 ಕಿ.ಮೀ. ಮಾರ್ಗದವರೆಗಿನ 209.14 ಎಕರೆ ಭೂಸ್ವಾಧೀನಪಡಿಸಿಕೊಂಡು, ಪರಿಹಾರ ಹಣ ಪಾವತಿಸಿ, ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ.  ಇಲ್ಲಿನ ಮಾರ್ಗದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.  ಈ ಪ್ರದೇಶದಲ್ಲಿನ ಅರಣ್ಯ ಇಲಾಖೆ ಭಾಗಕ್ಕೆ ಜಿಲ್ಲಾಧಿಕಾರಿಗಳಿಂದ ಕ್ಲಿಯರೆನ್ಸ್ ಅನ್ನು ರೈಲ್ವೆ ಇಲಾಖೆಗೆ ಸಲ್ಲಿಸುವುದು ಬಾಕಿ ಇದ್ದು, ಶೀಘ್ರದಲ್ಲಿ ಇದೂ ಕೂಡ ಪೂರ್ಣಗೊಳ್ಳಲಿದೆ ಎಂದು ಇಲ್ಲಿನ ವಿಶೇಷ ಭೂಸ್ವಾಧೀನ ಅಧಿಕಾರಿ ರೇಷ್ಮಾ ಹಾನಗಲ್ ಅವರು ಸಭೆಗೆ ಮಾಹಿತಿ ನೀಡಿದರು.

ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ವಿಶೇಷ ಭೂಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯಕ್ ಮಾತನಾಡಿ, ಜಿಲ್ಲೆಯ ನೀರ್ಥಡಿಯಿಂದ ಸಿದ್ದಾಪುರ ವರೆಗೆ 4.8 ಕಿ.ಮೀ. ಗಾಗಿ 28 ಎಕರೆ ಸ್ವಾಧೀನಪಡಿಸಿ, ರೈಲ್ವೆಗೆ ಹಸ್ತಾಂತರಿಸಲಾಗಿದೆ.

ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕಿನ ಒಟ್ಟು 42 ಗ್ರಾಮಗಳ ವ್ಯಾಪ್ತಿಯಲ್ಲಿ ಒಟ್ಟು 704.35 ಎಕರೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ.

ಚಿತ್ರದುರ್ಗ ತಾಲ್ಲೂಕಿನಿಂದ ಹಿರಿಯೂರು ವರೆಗೆ 46 ಕಿ.ಮೀ. ವ್ಯಾಪ್ತಿಯಲ್ಲಿ 398 ಎಕರೆ ಭೂಸ್ವಾಧೀನ ಸಂಬಂಧ 35 ಕೋಟಿ ರೂ. ಪಾವತಿಯಾಗಿದ್ದು, ಇನ್ನೂ 145 ಕೋಟಿ ರೂ. ಗಳ ಅಗತ್ಯವಿದೆ.  ನೀರ್ಥಡಿಯಿಂದ ಮಾರಘಟ್ಟವರೆಗೆ 21 ಕಿ.ಮೀ. ವರೆಗಿನ ಭೂಸ್ವಾಧೀನ ಪ್ರಕ್ರಿಯೆ ಅಂತಿಮಗೊಂಡಿದ್ದು, ಇದಕ್ಕಾಗಿ 80 ಕೋಟಿ ರೂ. ಪಾವತಿಸಿದಲ್ಲಿ, ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಬಹುದಾಗಿದೆ.  ಶಿರಾ ಕಡೆಯಿಂದ ಹಿರಿಯೂರು ಕಡೆಗೆ 9.4 ಕಿ.ಮೀ. ಭೂಸ್ವಾಧೀನ ಪೂರ್ಣಗೊಂಡಿದ್ದು, 117 ಎಕರೆ ರೈಲ್ವೆಗೆ ಹಸ್ತಾಂತರವಾಗಿದೆ ಎಂದರು.

ಚಿತ್ರದುರ್ಗ ತಾಲ್ಲೂಕಿನಲ್ಲಿ ಭೂಸ್ವಾಧೀನಕ್ಕೆ 35.35 ಕೋಟಿ ರೂ. ಹಾಗೂ ಹಿರಿಯೂರು  ತಾಲ್ಲೂಕಿನಲ್ಲಿ 67.06 ಸೇರಿದಂತೆ ಒಟ್ಟು 102.41 ಕೋಟಿ ರೂ. ಖರ್ಚು ಮಾಡಲಾಗಿದೆ, ಇನ್ನೂ 180.69 ಕೋಟಿ ರೂ. ಅನುದಾನ ಬಿಡುಗಡೆಯಾಗಬೇಕಿದೆ ಎಂದರು.   ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು,

ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕುಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ತ್ವರಿತಗೊಳಿಸಬೇಕು.  ಯೋಜನೆ ಪ್ರಾರಂಭಗೊಂಡು ಹತ್ತು ವರ್ಷಗಳೇ ಕಳೆದಿದ್ದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ ಎಂದರೆ ಹೇಗೆ.  ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ, ಅದನ್ನು ಗಮನಕ್ಕೆ ತರಬೇಕು.  ತಾವೇ ಖುದ್ದಾಗಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡಿ, ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದ ಸಂಸದರು, ಎರಡು ತಿಂಗಳ ಒಳಗಾಗಿ ನೂತನ ರೈಲ್ವೆ ಮಾರ್ಗಕ್ಕೆ ಭೂಮಿ ಪೂಜೆ ನೆರವೇರಿಸಲು ಅಗತ್ಯವಿರುವ ಎಲ್ಲ ಪ್ರಯತ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಜಿಲ್ಲೆಯ ವಿಶೇಷ ಭೂಸ್ವಾಧೀನ ಅಧಿಕಾರಿ ಧರ್ಮಪಾಲ್ ಅವರು ಮಾತನಾಡಿ, ಜಿಲ್ಲೆಯ ಉಜ್ಜನಕುಂಟೆ-ತುಮಕೂರು ಮಾರ್ಗದಲ್ಲಿ ಒಟ್ಟು 58 ಕಿ.ಮೀ. ಬರಲಿದ್ದು, ಇದರಲ್ಲಿ ಶಿರಾ ತಾಲ್ಲೂಕು 40 ಹಾಗೂ ತುಮಕೂರು-18 ಕಿ.ಮೀ. ಇರಲಿದೆ.  ಉಜ್ಜನಕುಂಟೆ-ಕಡವಿಗೆರೆ ಮಾರ್ಗದ 25 ಕಿ.ಮೀ. ವ್ಯಾಪ್ತಿಗೆ 115 ಎಕರೆ ಭೂಸ್ವಾಧೀನ ಪ್ರಕ್ರಿಯೆ ಆಗಿದೆ.  ಕಡವಿಗೆರೆ-ತುಮಕೂರು 35 ಕಿ.ಮೀ. ನಲ್ಲಿ ಭೂಸ್ವಾಧೀನದ ಅವಾರ್ಡ್ ಆಗುವುದು ಬಾಕಿ ಇದೆ.  ಶಿರಾ ತಾಲ್ಲೂಕಿನಲ್ಲಿ 20 ಕಿ.ಮೀ. ಮಾರ್ಗಕ್ಕಾಗಿ 146 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅನುಮೋದನೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ.  ಅವಾರ್ಡ್‍ಗೆ ಇನ್ನೂ 100 ಕೋಟಿ ರೂ. ಅನುದಾನದ ಅಗತ್ಯವಿದೆ. 34 ಎಕರೆ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಕ್ಲಿಯರೆನ್ಸ್ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಮಾತನಾಡಿ, ಅರಣ್ಯ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು, ಅಲ್ಲದೆ ಜಿಲ್ಲೆಯ ವ್ಯಾಪ್ತಿಯಲ್ಲಿ ರೈಲ್ವೆ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಲು ಅಗತ್ಯ ಎಲ್ಲ ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ವಿಶೇಷ ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ರೈಲ್ವೆ ಇಲಾಖೆಯ ಅಧಿಕಾರಿ ಎ. ಭಾರದ್ವಾಜ್, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ರೈಲ್ವೆ ಹಾಗೂ ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!