Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಚುನಾವಣೆ : ಈ ಬಾರಿ ನಮಗೆ ಟಿಕೆಟ್ ಕೊಡಿ : ಮುಸ್ಲಿಂ ಮುಖಂಡರಿಂದ ಒತ್ತಾಯ

---Advertisement---

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದರ ನಡುವೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಶಾಮನೂರು ಕುಟುಂಬಕ್ಕೆ ಟಿಕೆಟ್ ಕೊಡಬೇಕು ಅಂತ ಒಂದಷ್ಟು ಮಂದಿ ಒಲವು ತೋರಿದರೆ, ಶಾಮನೂರು ಶಿವಶಂಕರಪ್ಪ ಅವರೇ ಹೇಳಿದ್ದರು, ಮುಂದಿನ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ. ಅದರಂತೆ ಈ ಬಾರಿ ನಮಗೆ ಟಿಕೆಟ್ ನೀಡಿ ಅಂತ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಅದಕ್ಕೆ ಸಚಿವ ಜಮೀರ್ ಅಹ್ಮದ್ ಅವರ ಬೆಂಬಲವೂ ಇದೆ.

ಆದರೆ ಇದರ ನಡುವೆ ಕೆಲ ಮುಸ್ಲಿಂ ಮುಖಂಡರು, ಸಮರ್ಥ್ ಶಾಮನೂರು ಅವರಿಗೇನೆ ಟಿಕೆಟ್ ನೀಡಿ ಅಂತಿದ್ದಾರೆ. ಈ ಸಂಬಂಧ ಈಗಾಗಲೇ ಸಿಎಂ ಹಾಗೂ ಡಿಸಿಎಂಗೆ ಒತ್ತಾಯ ಕೂಡ ಮಾಡಿದ್ದಾರೆ. ಈ ರೀತಿ ತಮ್ಮದೇ ಮುಖಂಡರು ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿರೋದನ್ನ ಮುಸ್ಲಿಂ ಯುವಕರು ವಿರೋಧಿಸಿದ್ದು, ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷರನ್ನು ಪ್ರಶ್ನೆ ಮಾಡು, ಘೇರಾವ್ ಹಾಕಲು ಯುವಕರ ಗುಂಪು ಮುಂದಾಗಿದೆ.

ಈಗಾಗಲೇ ಚುನಾವಣಾ ಆಯೋಗದಿಂದ ಉಪಚುನಾವಣೆಯ ದಿನಾಂಕ ಹಾಗೂ ಮತ ಏಣಿಕೆಯ ದಿನಾಂಕವನ್ನು ಘೊಇಷಣೆ ಮಾಡಲಾಗಿದೆ. ಏಪ್ರಿಲ್ 9ರಂದು ಈ ಸಂಬಂಧ ಚುನಾವಣೆ ನಡೆದರೆ, ಮೇ 4 ರಂದು ಮತ ಎಣಿಕೆಯೂ ನಡೆಯಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಾಕಷ್ಟು ಡಿಮ್ಯಾಂಡ್ ಇದ್ದು, ಕಾಂಗ್ರೆಸ್ ಹೈಕಮಾಂಡ್ ಅಲ್ಲಸಂಖ್ಯಾತರಿಗೆ ನೀಡುತ್ತಾ ಅಥವಾ ಮತ್ತೆ ಕುಟುಂಬದವರಿಗೆ ಕೊಡುತ್ತಾ ಎಂಬುದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now