Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ; ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ..!

---Advertisement---

ದಾವಣಗೆರೆ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. SPF ನಗರದಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 4 ವರ್ಷದ ಸಿಂಧುಶ್ರೀ, 3 ವರ್ಷದ ಶ್ರೀಜಯ್ ನನ್ನು ಕೊಂದು 35 ವರ್ಷದ ತಂದೆ ಉದಯ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಸಾವಿನಿಂದ ನೋವಿನಲ್ಲಿದ್ದ ವ್ಯಕ್ತಿ ಇಂದು ಈ ರೀತಿ ಲೋಕವನ್ನೇ ತ್ಯಜಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಉದಯ್ ಅವರ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಉದಯ್ ಖಿನ್ನತೆಗೆ ಒಳಗಾಗಿದ್ದರು. ಅದೇ ನೋವಿನಿಂದ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳನ್ನು ಕೊಂದು ತಾನೂ ಪ್ರಾಣ ಕಳೆದುಕೊಂಡಿದ್ದಾರೆ. ಪತ್ನಿಯನ್ನು ಎಷ್ಟು ಅಚ್ಚಿಕೊಂಡಿದ್ದರು ಎಂಬುದಕ್ಕೆ ಅವರು ಬರೆದ ಪತ್ರವೇ ಸಾಕ್ಷಿ. ಗೋಡೆಯ ಮೇಲೆ ರಕ್ತದಲ್ಲಿ ಐ ಲವ್ ಯೂ ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೇಮಾ ಹಾಸನ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೆರೆ ನಿವಾಸಿ. ಉದಯ್ ಹಾಗೂ ಹೇಮಾ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಇದ್ದರು. ಆದರೆ ಎಂಟು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಪತ್ನಿ ಹೇಮಾ ಸಾವನ್ನಪ್ಪಿದ್ದಳು. ಒಂದು ಕಡೆ ಪ್ರೀತಿಸಿದ ಹೆಂಡತಿ ಇಲ್ಲ, ಮತ್ತೊಂದು ಕಡೆ ಪುಟ್ಟ ಪುಟ್ಟ ಮಕ್ಕಳು. ಉದಯ್ ಗೆ ಬದುಕೇ ದೊಡ್ಡ ಚಿಂತೆಯಾಗಿದೆ. ಬದುಕುವುದಕ್ಕೂ ಆಗದೆ ಸಾಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ರೀತಿ ಹೆಂಡತಿಯಿಲ್ಲದ ನೋವು ಅಗಾಧವಾಗಿ ಕಾಡಿದರೆ ಅಲ್ಲಿ ಮಕ್ಕಳನ್ನು ಒಂಟಿಯಾಗಿ ಬಿಟ್ಟು ಹೋಗಲು ಗಂಡನಾದವ ಯೋಚಿಸುವುದಿಲ್ಲ. ನಾನು ಇಲ್ಲವಾದರೆ ಮಕ್ಕಳ ಗತಿ ಏನು ಎಂಬ ಚಿಂತೆ ಕಾಡಿರುವ ಅನುಮಾನವಿದೆ. ಹೀಗಾಗಿ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment