Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್ ಸೇರಿದಂತೆ ಐವರಿಗೆ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ

---Advertisement---

 

ದಾವಣಗೆರೆ, ಫೆ. 02  : ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗೆ ರಾಜ್ಯದ ಪ್ರತಿಷ್ಠಿತ ಪತ್ರಕರ್ತರ ಬೃಹತ್ ಸಂಘಟನೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ 5 ಜನರು ಭಾಜನರಾಗಿದ್ದಾರೆ.

ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಜನತಾವಾಣಿ ಸುದ್ದಿ ಸಂಪಾದಕ ಎಂ.ಎಸ್. ಶಿವಶರಣಪ್ಪ, ಹಿರಿಯ ವ್ಯಂಗ್ಯಚಿತ್ರಕಾರ ಹೆಚ್.ಬಿ. ಮಂಜುನಾಥ್,
ಮಲ್ನಾಡವಾಣಿ ಸಂಪಾದಕರಾದ ಕೆ. ಏಕಾಂತಪ್ಪ,
ಮತ್ತು ಚಂದನ ಟಿವಿ ಹಿರಿಯ ವರದಿಗಾರ ಎ.ಎಲ್. ತಾರಾನಾಥ್ ಅವರುಗಳು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿ ವರ್ಷವೂ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಈ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯರು ಮತ್ತು ಪ್ರತಿಭಾನ್ವಿತರನ್ನು ಗುರುತಿಸಿ ನೀಡುತ್ತಿರುವ ಈ ಪ್ರಶಸ್ತಿಗೆ ಈ ಬಾರಿ 40ಕ್ಕೂ ಹೆಚ್ಚು ಪತ್ರಕರ್ತರನ್ನು  ಆಯ್ಕೆ ಮಾಡಲಾಗಿದ್ದು, ನಾಳೆ ದಿನಾಂಕ 3 ಮತ್ತು 4ರಂದು ದಾವಣಗೆರೆಯಲ್ಲಿ ಏರ್ಪಾಡಾಗಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಅಭಿನಂದನೆ : ಪತ್ರಿಕೋದ್ಯಮದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗೆ ರಾಜ್ಯದ ಪ್ರತಿಷ್ಠಿತ ಪತ್ರಕರ್ತರ ಬೃಹತ್ ಸಂಘಟನೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಮಲ್ನಾಡವಾಣಿ ಸಂಪಾದಕರಾದ ಕೆ. ಏಕಾಂತಪ್ಪ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ಜನತಾವಾಣಿ ಸುದ್ದಿ ಸಂಪಾದಕ ಎಂ.ಎಸ್. ಶಿವಶರಣಪ್ಪ, ಹಿರಿಯ ವ್ಯಂಗ್ಯಚಿತ್ರಕಾರ ಹೆಚ್.ಬಿ. ಮಂಜುನಾಥ್ ಮತ್ತು ಚಂದನ ಟಿವಿ ಹಿರಿಯ ವರದಿಗಾರ ಎ.ಎಲ್. ತಾರಾನಾಥ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲಾಧ್ಯಕ್ಷ ಇ.ಎಂ. ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ. ಫಕೃದ್ಧೀನ್, ಖಜಾಂಚಿ ಎನ್.ವಿ. ಬದರಿನಾಥ್, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಸಿ.ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ಅಭಿನಂದನೆ ಸಲ್ಲಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment