Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

---Advertisement---

 

 

ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ ಬಳಗದ ಪ್ರಮುಖರಾದ ಜಿ. ಬಿ. ವಿನಯ್ ಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಗರದಲ್ಲಿ ಇದುವರೆಗೆ ಯಾವುದೇ ಗಲಾಟೆಯಾಗಿರಲಿಲ್ಲ. ಎರಡೂ ಕೋಮಿನ ಜನರು  ಶಾಂತಿಯುತವಾಗಿರಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು. ಗಲಾಟೆ ಮಾಡುವುದರಿಂದ ಯಾರಿಗೂ ಅನುಕೂಲವಾಗದು. ಬಡವರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗದವರಿಗೂ ತೊಂದರೆ ಆಗುತ್ತಿದೆ. ಪೊಲೀಸರು ತಪ್ಪು ಯಾರೇ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಸಹಕಾರ ಅಗತ್ಯ. ಕೋಮು ಪ್ರಚೋದನೆ ಯಾರೇ ಮಾಡಿದರೂ ತಪ್ಪು. ಬೇತೂರು ರಸ್ತೆಯಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಅಶಾಂತಿ ವಾತಾವರಣ ನಿರ್ಮಾಣ ಆಗಿತ್ತು. ಪೊಲೀಸರು ಬಂಧಿಸುವ ವೇಳೆ ಅಮಾಯಕರನ್ನು ಬಂಧಿಸಬಾರದು. ಕಿಡಿಗೇಡಿಗಳನ್ನು ಗುರುತಿಸಿ ಜೈಲಿಗಟ್ಟಲಿ. ಎರಡೂ ಕೋಮಿನ ಸಮಾಜದ ಮುಖಂಡರು ಯುವಕರಿಗೆ ತಿಳಿಹೇಳಬೇಕು. ಗಲಾಟೆಗೆ ಮುಂದೆ ಆಸ್ಪದ ನೀಡಬಾರದು ಎಂದು ಹೇಳಿದ್ದಾರೆ.

ಪೊಲೀಸರು ಬಂಧಿಸುವ ವೇಳೆ ಅಮಾಯಕರನ್ನು ಬಂಧಿಸುವ ಕೆಲಸ ಆಗುತ್ತಿದೆ ಎಂಬ ಮಾತೂ ಕೇಳಿ ಬರುತ್ತಿದೆ. ಸಿಸಿಟಿವಿ, ಕಲ್ಲು ಎಸೆದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡರೆ ಮತ್ತೆ ಮರುಕಳಿಸುವುದಿಲ್ಲ. ಯಾರೂ ಕೋಮು ಪ್ರಚೋದಕ ಹೇಳಿಕೆ ನೀಡಬಾರದು. ಯಾವುದೇ ರಾಜಕೀಯ ಪಕ್ಷಗಳು ಓಲೈಕೆ ರಾಜಕಾರಣ ಮಾಡಬಾರದು. ಒಂದು ಕೋಮಿನ ಪರ ನಿಲ್ಲಬಾರದು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸಮಾಜದಲ್ಲಿ ಸಾಮರಸ್ಯ ಮೂಡಬೇಕು. ಶಾಂತಿ ನೆಲೆಸಬೇಕು. ಎಲ್ಲಾ ಧರ್ಮದವರೂ ಸಹೋದರರಂತೆ ಬಾಳಬೇಕು. ಯಾರೋ ಕೆಲ ಕಿಡಿಗೇಡಿಗಳು ಎಸಗುವ ಕೃತ್ಯಕ್ಕೆ ಸಮಾಜದ ಸ್ವಾಸ್ಥ್ಯ ಹಾಳಾಗಬಾರದು. ಯುವಕರು ಜಾಗೃತರಾಗಬೇಕು. ಯಾರೋ ನೀಡಿದ ಕುಮ್ಮಕ್ಕಿಗೆ ಬಲಿಯಾಗಬಾರದು. ಆದ್ದರಿಂದ ಎಲ್ಲಾ ಕೋಮಿನವರು ಶಾಂತಿ, ಸೌಹಾರ್ದ, ತಾಳ್ಮೆಯಿಂದ ವರ್ತಿಸಬೇಕು ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...