Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ನ್ಯಾಮತಿ ಮರಿಗೊಂಡನಹಳ್ಳಿ ಶಿವರಾಜ್ ಕೊಲೆ, ಪತ್ನಿ ಚೈತ್ರಾಗೆ ರೂ.4,12,500 ರೂ.ಗಳ ಪರಿಹಾರ

---Advertisement---

 

ದಾವಣಗೆರೆ,ಸೆ.19 : ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿಯಲ್ಲಿ ಸೆಪ್ಟೆಂಬರ್ 18 ರಂದು ಪ.ಜಾತಿಯವರಾದ ಶಿವರಾಜ್ ಇವರಿಗೆ ಇದೇ ಗ್ರಾಮದವರು ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿದ್ದು ಜಿಲ್ಲಾಡಳಿತವು ಕೊಲೆಯಾದ ಶಿವರಾಜ್ ಇವರ ಪತ್ನಿ ಸಂತ್ರಸ್ಥೆಯಾದ ಚೈತ್ರಾಗೆ ಒಂದೇ ದಿನದಲ್ಲಿ ರೂ.4,12,500 ರೂ.ಗಳ ಪರಿಹಾರದ ಚೆಕ್‍ನ್ನು ನೀಡುವ ಮೂಲಕ ಮಾನವೀಯತೆ ಮರೆಯಲಾಗಿದೆ.

ಪರಿಶಿಷ್ಟ ಜನಾಂಗದವರ ಮೇಲೆ ದೌರ್ಜನ್ಯವಾಗಿ ಸಂತ್ರಸ್ಥರಾದವರಿಗೆ ತಕ್ಷಣ ಪರಿಹಾರ ನೀಡುವ ಯೋಜನೆ ಇದಾಗಿದ್ದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರ ಆದೇಶದಂತೆ ಎಫ್‍ಐಆರ್ ಮತ್ತು ಮರಣೋತ್ತರ ಪರೀಕ್ಷೆ ಆಧಾರದ ಮೇಲೆ ಸಂತ್ರಸ್ಥರ ಬ್ಯಾಂಕ್ ಖಾತೆಗೆ ಖಜನೆ ಮೂಲಕ ಮಂಜೂರಾತಿ ಮಾಡಿ ಆದೇಶಿಸಲಾಗಿರುತ್ತದೆ.

ಇದೇ ಘಟನೆಯಲ್ಲಿ ಮತ್ತೊಬ್ಬ ಸಂತ್ರಸ್ಥ ಭರತ ತಂದೆ ರಮೇಶ್ ಇವರು ಸಹ ಗಾಯಾಳುಗಳಾಗಿದ್ದು ಶಿವಮೊಗ್ಗ ಮೆಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೂ ಎಫ್‍ಐಆರ್ ಹಂತದಲ್ಲಿ ರೂ 50,000 ಗಳನ್ನು ಸಂತಸ್ಥರ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಜಮೆ ಮಾಡಲಾಗಿರುತ್ತದೆ.
ದಾವಣಗೆರೆ ಜಿಲ್ಲಾಡಳಿತವು ತ್ವರಿತಗತಿಯಲ್ಲಿ ಸಂತ್ರಸ್ತರಿಗೆ ಪರಿಹಾರ ಮಂಜೂರಾತಿ ಮಾಡಿ ಆದೇಶಿಸಲಾಗಿದೆ. ಹಾಗೂ ನೊಂದವರ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ಸಹ ವಿತರಣೆ ಮಾಡಲಾಗಿದ್ದು ಸಂತಸ್ಥರಿಗೆ ಸಾಂತ್ವನ ತಿಳಿಸಿ ಕಾನೂನು ನೆರವು ನೀಡಲಾಗಿದೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಉಪವಿಭಾಗಾಧಿಕಾರಿ ಅಭಿಷೇಕ್,  ಹೊನ್ನಾಳಿ ತಹಶೀಲ್ದಾರ್ ಗೋವಿಂದಪ್ಪ  ಭೇಟಿ ನೀಡಿ ಮಂಜೂರಾತಿ ಆದೇಶ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment