ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ, ಏ.18 : ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ ಹಾಗೂ ಮಾನಸಿಕ ವೇದನೆ, ಪ್ರಕರಣದ ಖರ್ಚಾಗಿ ರೂ.60 ಸಾವಿರ ಭರಿಸುವಂತೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ದಾವಣಗೆರೆ ನಿವಾಸಿ ಟಿ. ಕುಮಾರ ಅವರು ತಮ್ಮ ಎಡಗೈ ಉಂಟಾದ ಗಾಯಕ್ಕೆ ಚಿಕಿತ್ಸೆ ಕೋರಿ 2022 ರ ಫೆಬ್ರವರಿ 2 ರಂದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ತೋರಿಸಿದಾಗ ವೈದ್ಯರು ಎಡಕ್ಕೆ ಮೂಳೆ ಮುರಿದಿದ್ದು, ಅದಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕಾಗಬಹುದೆಂದು ನಿರ್ಧರಿಸಿ ರೋಗಿಗೆ 2022 ರ ಫೆಬ್ರವರಿ 16 ರಂದು ಶಸ್ತ್ರಚಿಕಿತ್ಸೆ ನಡೆಸಿ 2022 ರ ಫೆಬ್ರವರಿ 21 ರಂದು ಬಿಡುಗಡೆ ಮಾಡಿದ್ದರು.
ಆದರೆ ಗುಣಹೊಂದದೇ ಇರುವುದರಿಂದ, ರೋಗಿಯು ಸರ್ಕಾರಿ ಆಸ್ಪತ್ರೆಯಲ್ಲಿ ಸಮಾಲೋಚಿಸಿದಾಗ ಎಡಗೈ ಮೂಳೆ ಸರಿಯಿರುವುದು ಎಕ್ಸರೇ ವರದಿಯಿಂದ ತಿಳಿದು ಬಂದಿರುತ್ತದೆ. ಸರ್ಕಾರಿ ಆಸ್ಪತ್ರೆ ವೈದ್ಯರು ರೋಗಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ನೀಡಿದ ಸಲಹೆಗೆ ರೋಗಿಯು ಮಣಿಪಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುತ್ತಾರೆ.

ರೋಗಿವು ದಾವಣಗೆರೆ ಖಾಸಗಿ ಆಸ್ಪತ್ರೆ ವೈದ್ಯರು ಸೇವಾ ನ್ಯೂನ್ಯತೆ ಮಾಡಿದ ಬಗ್ಗೆ ಸಕ್ಷಮ ಪ್ರಾಧಿಕಾರದೊಂದಿಗೆ ಪತ್ರ ವ್ಯವಹಾರ ನಡೆಸಿ, ತಪ್ಪಿತಸ್ತ ವೈದ್ಯರ ಮೇಲೆ ಸೂಕ್ತ ಕ್ರಮಕ್ಕಾಗಿ ಆಶ್ರಯಿಸಿದ್ದರು. ಆದರೆ, ಸೂಕ್ತ ಕ್ರಮ ಜರುಗಿಸಲು ಒಪ್ಪದ ಪ್ರಾಧಿಕಾರ, ವೈದ್ಯರನ್ನು ತಪ್ಪಿತಸ್ತರಲ್ಲ ಎಂದು ನಿರ್ಧರಿಸಿ ಹಿಂಬರಹ ನೀಡಿತ್ತು.
ಪ್ರಾಧಿಕಾರ ಕ್ರಮ ಪ್ರಶ್ನಿಸಿ ಮತ್ತು ಸೂಕ್ತ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ವಹಿಸಿದ್ದು ವೈದ್ಯರಿಂದ ಪರಿಹಾರ ಕೋರಿ, ದೂರುದಾರ ಕುಮಾರ.ಟಿ. ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಸದರಿ ಪ್ರಕರಣದಲ್ಲಿ ಎದುರುದಾರರಾಗಿ ಹಾಜರಾದ ವೈದ್ಯರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ದೂರುದಾರರು ಹಾಜರುಪಡಿಸಿದ ಸೂಕ್ತ ದಾಖಲೆಗಳನ್ನು ಮತ್ತು ಉಭಯ ಪಕ್ಷಗಾರರ ಅಹವಾಲನ್ನು ಪರಿಶೀಲಿಸಿದ ಆಯೋಗ, ದೂರುದಾರರು ಸಲ್ಲಿಸಿದ ದೂರನ್ನು ಪುರಸ್ಕರಿಸಿ, ಎದುರುದಾರ ವೈದ್ಯರು ಸೇವೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ನಿರ್ಣಯಿಸಿ, ಎದುರುದಾರ ವೈದ್ಯರು, ನೊಂದ ದೂರುದಾರ ಗ್ರಾಹಕ ರೋಗಿಗೆ ಪರಿಹಾರ ರೂಪವಾಗಿ ಒಟ್ಟು ರೂ.4,36,626 ಮತ್ತು ಮಾನಸಿಕ ವೇದನೆ ಮತ್ತು ಪ್ರಕರಣದ ಖರ್ಚು ಒಟ್ಟು ರೂ.60,000/- ನೀಡಲು ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಬಿ.ಯು. ಗೀತಾ ಇವರು ಆದೇಶಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್