Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ | ರೂ.4.96 ಲಕ್ಷ ಪರಿಹಾರ ನೀಡಲು ಕನ್ಸ್ಯೂಮರ್ ಕೋರ್ಟ್ ಆದೇಶ

Facebook
Twitter
Telegram
WhatsApp

ದಾವಣಗೆರೆ,  ಏ.18 :  ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ ಹಾಗೂ ಮಾನಸಿಕ ವೇದನೆ, ಪ್ರಕರಣದ ಖರ್ಚಾಗಿ ರೂ.60 ಸಾವಿರ ಭರಿಸುವಂತೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ದಾವಣಗೆರೆ ನಿವಾಸಿ ಟಿ. ಕುಮಾರ ಅವರು ತಮ್ಮ ಎಡಗೈ ಉಂಟಾದ ಗಾಯಕ್ಕೆ ಚಿಕಿತ್ಸೆ ಕೋರಿ 2022 ರ ಫೆಬ್ರವರಿ 2 ರಂದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ತೋರಿಸಿದಾಗ ವೈದ್ಯರು ಎಡಕ್ಕೆ ಮೂಳೆ ಮುರಿದಿದ್ದು, ಅದಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕಾಗಬಹುದೆಂದು ನಿರ್ಧರಿಸಿ ರೋಗಿಗೆ 2022 ರ ಫೆಬ್ರವರಿ 16 ರಂದು ಶಸ್ತ್ರಚಿಕಿತ್ಸೆ ನಡೆಸಿ 2022 ರ ಫೆಬ್ರವರಿ 21 ರಂದು ಬಿಡುಗಡೆ ಮಾಡಿದ್ದರು.

ಆದರೆ ಗುಣಹೊಂದದೇ ಇರುವುದರಿಂದ, ರೋಗಿಯು ಸರ್ಕಾರಿ ಆಸ್ಪತ್ರೆಯಲ್ಲಿ ಸಮಾಲೋಚಿಸಿದಾಗ ಎಡಗೈ ಮೂಳೆ ಸರಿಯಿರುವುದು ಎಕ್ಸರೇ ವರದಿಯಿಂದ ತಿಳಿದು ಬಂದಿರುತ್ತದೆ. ಸರ್ಕಾರಿ ಆಸ್ಪತ್ರೆ ವೈದ್ಯರು ರೋಗಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ನೀಡಿದ ಸಲಹೆಗೆ ರೋಗಿಯು ಮಣಿಪಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುತ್ತಾರೆ.

ರೋಗಿವು ದಾವಣಗೆರೆ ಖಾಸಗಿ ಆಸ್ಪತ್ರೆ ವೈದ್ಯರು ಸೇವಾ ನ್ಯೂನ್ಯತೆ ಮಾಡಿದ ಬಗ್ಗೆ ಸಕ್ಷಮ ಪ್ರಾಧಿಕಾರದೊಂದಿಗೆ ಪತ್ರ ವ್ಯವಹಾರ ನಡೆಸಿ, ತಪ್ಪಿತಸ್ತ ವೈದ್ಯರ ಮೇಲೆ ಸೂಕ್ತ ಕ್ರಮಕ್ಕಾಗಿ ಆಶ್ರಯಿಸಿದ್ದರು. ಆದರೆ, ಸೂಕ್ತ ಕ್ರಮ ಜರುಗಿಸಲು ಒಪ್ಪದ ಪ್ರಾಧಿಕಾರ, ವೈದ್ಯರನ್ನು ತಪ್ಪಿತಸ್ತರಲ್ಲ ಎಂದು ನಿರ್ಧರಿಸಿ ಹಿಂಬರಹ ನೀಡಿತ್ತು.

ಪ್ರಾಧಿಕಾರ ಕ್ರಮ ಪ್ರಶ್ನಿಸಿ ಮತ್ತು ಸೂಕ್ತ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ವಹಿಸಿದ್ದು ವೈದ್ಯರಿಂದ ಪರಿಹಾರ ಕೋರಿ, ದೂರುದಾರ ಕುಮಾರ.ಟಿ. ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಸದರಿ ಪ್ರಕರಣದಲ್ಲಿ ಎದುರುದಾರರಾಗಿ ಹಾಜರಾದ ವೈದ್ಯರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ದೂರುದಾರರು ಹಾಜರುಪಡಿಸಿದ ಸೂಕ್ತ ದಾಖಲೆಗಳನ್ನು ಮತ್ತು ಉಭಯ ಪಕ್ಷಗಾರರ ಅಹವಾಲನ್ನು ಪರಿಶೀಲಿಸಿದ ಆಯೋಗ, ದೂರುದಾರರು ಸಲ್ಲಿಸಿದ ದೂರನ್ನು ಪುರಸ್ಕರಿಸಿ, ಎದುರುದಾರ ವೈದ್ಯರು ಸೇವೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ನಿರ್ಣಯಿಸಿ, ಎದುರುದಾರ ವೈದ್ಯರು, ನೊಂದ ದೂರುದಾರ ಗ್ರಾಹಕ ರೋಗಿಗೆ ಪರಿಹಾರ ರೂಪವಾಗಿ ಒಟ್ಟು ರೂ.4,36,626 ಮತ್ತು ಮಾನಸಿಕ ವೇದನೆ ಮತ್ತು ಪ್ರಕರಣದ ಖರ್ಚು ಒಟ್ಟು ರೂ.60,000/- ನೀಡಲು ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಬಿ.ಯು. ಗೀತಾ ಇವರು ಆದೇಶಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!