ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಟಿ. ಶ್ರೀನಿವಾಸ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಅಫಿಡವಿಟ್ ಪ್ರಕಾರ, ಶ್ರೀನಿವಾಸ ಅವರ ಒಟ್ಟು ಆಸ್ತಿ ಮೌಲ್ಯ ₹5.76 ಕೋಟಿಯಾಗಿದೆ. ಇದರಲ್ಲಿ ₹34.79 ಲಕ್ಷ ಮೌಲ್ಯದ ಚರಾಸ್ತಿ ಹಾಗೂ ₹5.41 ಕೋಟಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಸ್ಥಿರಾಸ್ತಿಯಲ್ಲಿ ₹1.13 ಕೋಟಿ ಮೌಲ್ಯದ ಪಿತ್ರಾರ್ಜಿತ ಕೃಷಿ ಭೂಮಿ ಮತ್ತು ₹4.27 ಕೋಟಿ ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಒಳಗೊಂಡಿವೆ. ಜೊತೆಗೆ, ಅವರ ಬಳಿ ₹3.60 ಲಕ್ಷ ನಗದು ಇರುವುದಾಗಿ ಉಲ್ಲೇಖಿಸಲಾಗಿದೆ.
45 ವರ್ಷದ ಶ್ರೀನಿವಾಸ ಅವರು ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ. ಸೈನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಪೂರ್ಣಗೊಳಿಸಿದ್ದಾರೆ.
ಇನ್ನೊಂದೆಡೆ, ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹2.96 ಲಕ್ಷ ಸಾಲ ಬಾಕಿ ಇರುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಹಾಗೂ ಯಾವುದೇ ಶಿಕ್ಷೆ ಆಗಿಲ್ಲ ಎಂದು ಅಫಿಡವಿಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












