ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಟಿ. ಶ್ರೀನಿವಾಸ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಅಫಿಡವಿಟ್ ಪ್ರಕಾರ, ಶ್ರೀನಿವಾಸ ಅವರ ಒಟ್ಟು ಆಸ್ತಿ ಮೌಲ್ಯ ₹5.76 ಕೋಟಿಯಾಗಿದೆ. ಇದರಲ್ಲಿ ₹34.79 ಲಕ್ಷ ಮೌಲ್ಯದ ಚರಾಸ್ತಿ ಹಾಗೂ ₹5.41 ಕೋಟಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಸ್ಥಿರಾಸ್ತಿಯಲ್ಲಿ ₹1.13 ಕೋಟಿ ಮೌಲ್ಯದ ಪಿತ್ರಾರ್ಜಿತ ಕೃಷಿ ಭೂಮಿ ಮತ್ತು ₹4.27 ಕೋಟಿ ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಒಳಗೊಂಡಿವೆ. ಜೊತೆಗೆ, ಅವರ ಬಳಿ ₹3.60 ಲಕ್ಷ ನಗದು ಇರುವುದಾಗಿ ಉಲ್ಲೇಖಿಸಲಾಗಿದೆ.
45 ವರ್ಷದ ಶ್ರೀನಿವಾಸ ಅವರು ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ. ಸೈನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಪೂರ್ಣಗೊಳಿಸಿದ್ದಾರೆ.
ಇನ್ನೊಂದೆಡೆ, ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹2.96 ಲಕ್ಷ ಸಾಲ ಬಾಕಿ ಇರುವುದಾಗಿ ತಿಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಹಾಗೂ ಯಾವುದೇ ಶಿಕ್ಷೆ ಆಗಿಲ್ಲ ಎಂದು ಅಫಿಡವಿಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







