Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಉಪಚುನಾವಣೆ: 39 ಅಭ್ಯರ್ಥಿಗಳ ನಾಮಪತ್ರ,  ರಾಜಕೀಯ ಲೆಕ್ಕಾಚಾರ ಗೊಂದಲ

---Advertisement---

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರೀ ಸ್ಪರ್ಧೆ ಕಂಡುಬಂದಿದ್ದು, ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ಬಾರಿ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ವಿವಿಧ ರಾಜಕೀಯ ಸಮೀಕರಣಗಳಿಗೆ ಕಾರಣವಾಗುತ್ತಿದೆ.

ಈ ಉಪಚುನಾವಣೆಯಲ್ಲಿ ಒಬ್ಬ ಮಹಿಳೆ ಸೇರಿ ಒಟ್ಟು 22 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ವಿಶೇಷವಾಗಿದ್ದು, ಇದರಿಂದ ಕ್ಷೇತ್ರದ ಮತಗಣಿತದಲ್ಲಿ ಮಹತ್ವದ ಬದಲಾವಣೆಗಳ ಸಾಧ್ಯತೆ ಕಾಣುತ್ತಿದೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಿಸಿರುವುದು ಕಾಂಗ್ರೆಸ್‌ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಅವರನ್ನು ಮನವೊಲಿಸಲು ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಮುಂದಾಗಿರುವುದಾಗಿ ತಿಳಿದುಬಂದಿದೆ.

ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾದರೆ ಕಾಂಗ್ರೆಸ್‌ನ ಮತಗಳು ವಿಭಜನೆಯಾಗುವ ಆತಂಕ ವ್ಯಕ್ತವಾಗಿದ್ದು, ಇದರಿಂದ ಪಕ್ಷದ ಗೆಲುವಿನ ಸಾಧ್ಯತೆ ಮೇಲೆ ಪರಿಣಾಮ ಬೀರುವ ಭೀತಿ ವ್ಯಕ್ತವಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಮುಖಂಡರು ರಾಜಿ ಸಂಧಾನದ ಪ್ರಯತ್ನಗಳಲ್ಲಿ ತೊಡಗಿಕೊಂಡಿದ್ದು, ಅಂತಿಮವಾಗಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿ ಉಳಿಯುತ್ತಾರೆ ಎಂಬುದು ಈಗಿನ ಪ್ರಮುಖ ಕುತೂಹಲವಾಗಿದೆ. ಇದಕ್ಕೂ ಮಧ್ಯೆ, ಮುಸ್ಲಿಂ ಸಮುದಾಯದೊಳಗೆ ಒಗ್ಗಟ್ಟಿನ ಮಾತುಗಳೂ ಕೇಳಿಬರುತ್ತಿವೆ. ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರಿಗೆ ಬೆಂಬಲ ಸೂಚಿಸಲು ಉಳಿದ ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಬೇಕು ಎಂಬ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ. ಈ ಚರ್ಚೆ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ರೂಪುಗೊಳ್ಳಲಿದೆ ಎಂಬುದು ಗಮನ ಸೆಳೆಯುತ್ತಿದೆ.

ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆಯಲ್ಲಿ ಒಟ್ಟು 45 ನಾಮಪತ್ರಗಳಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡಿವೆ. ಕರ್ನಾಟಕ ರಾಷ್ಟ್ರ ಸಮಿತಿಯ ಎಚ್‌.ಕೆ. ದಾವುಲ್ ಸಾಬ್ ಹಾಗೂ ಬಿಜೆಪಿ ಪರವಾಗಿ ಬಿ-ಫಾರ್ಮ್ ಇಲ್ಲದೆ ಸಲ್ಲಿಸಿದ್ದ ಯಶವಂತರಾವ್ ಜಾಧವ್ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ. ಇದೇ ವೇಳೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ಹೆಸರಿನಲ್ಲಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದರೂ, ಪಕ್ಷೇತರರಾಗಿ ಸಲ್ಲಿಸಿದ ನಾಮಪತ್ರ ಮಾನ್ಯವಾಗಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಕಣ ತೀವ್ರ ರಾಜಕೀಯ ಪೈಪೋಟಿಗೆ ಸಾಕ್ಷಿಯಾಗುತ್ತಿದ್ದು, ಅಂತಿಮವಾಗಿ ಅಭ್ಯರ್ಥಿಗಳ ಸಂಖ್ಯೆ ಹಾಗೂ ಮತ ವಿಭಜನೆ ಫಲಿತಾಂಶದ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...