Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ : ಕೈ ನಾಯಕರಲ್ಲಿ ಟಿಕೆಟ್ ಯಾರಿಗೆ.. ರಾಮಲಿಂಗಾ ರೆಡ್ಡಿ ಏನಂದ್ರು..?

---Advertisement---

 

ಬೆಂಗಳೂರು: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಏಪ್ರಿಲ್ 9ಕ್ಕೆ ದಿನಾಂಕವನ್ನ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಇದರ ನಡುವೆ ಟಿಕೆಟ್ ಫೈಟ್ ಕೂಡ ಜೋರಾಗಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.

ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಎರಡು ಕ್ಷೇತ್ರಗಳಿಗೂ ಬೈ ಎಲೆಕ್ಷನ್ ಇದೆ. ಎರಡು ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ ಎಂಬ ನಂಬಿಕೆಯೂ ಇದೆ. ಪಂಚ ರಾಜ್ಯಗಳು ಏಪ್ರಿಲ್ ತಿಂಗಳಲ್ಲಿ ಚುನಾವಣೆ ಆಗುತ್ತೆ. ನಮಗೆ ತಮಿಳುನಾಡು, ಅಸ್ಸಾಂನಲ್ಲೂ ಹೆಚ್ಚು ಚಾನ್ಸೆಸ್ ಇದೆ. ಮೋದಿಯವರ ವಿರೋಧಿ ಅಲೆ ಈ ಸಲ ಎನ್ಡಿಎ ಕೂಟಕ್ಕೆ ಅನುಕೂಲವಾಗಲಿದೆ. ಮೋದಿಯವರು ಟ್ರಂಪ್ ಹೇಳಿದಂತೆ ಕೇಳ್ತಾರೆ. ಹೀಗಾಗಿ ನಮ್ಮ ದೇಶದ ಹಿತಾಸಕ್ತಿಯನ್ನ ಬಲಿ ಕೊಟ್ಟಿದ್ದಾರೆ. ಎಪ್ಸ್ಟೀನ್ ಫೈಲ್ ಸೇರಿದಂತೆ ಹಲವು ವಿಚಾರಗಳು ಹೊರ ಬಂದಿದೆ. ಮೋದಿಯವರ ನಾಯಕತ್ವದಲ್ಲಿ ಜನಕ್ಕೆ ವಿಶ್ವಾಸವಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆ ಎನ್ಡಿಎ ಕೂಟಕ್ಕೆ ಅನುಕೂಲವಾಗಲಿದೆ. ದಾವಣಗೆರೆ ಟಿಕೆಟ್ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ.

ಇದೆ ವೇಳೆ ಸಿಎಂ ಔತಣಕೂಟದ ಬಗ್ಗೆ ಮಾತನ್ನಾಡಿ, ಇವತ್ತು ಸಂಜೆ ಇದೆ. ಹಿರಿಯರು ಅಂತಿದ್ದಾರಲ್ಲ ಆಗಾಗ ಕರೀತಾರೆ. ಈಗ ವಿಪಕ್ಷಗಳು ಏನೆಲ್ಲಾ ಕಾರ್ಯತಂತ್ರ ರೂಪಿಸ್ತಾರಲ್ಲ ಆ ಬಗ್ಗೆ ಎಲ್ಲಾ ನಾವೂ ಆಲೋಚನೆ ಮಾಡ್ಬೇಕು ಅಲ್ವಾ. ರಾಜಕಾರಣದ ಬಗ್ಗೆ, ಒಳಮೀಸಲಾತಿ ಬಗ್ಗೆ, ಇನ್ನೇನಾದ್ರೂ ವಿಚಾರಗಳಿದ್ರೆ ಸಹಜವಾಗಿಯೇ ಚರ್ಚೆಗಳಾಗುತ್ತವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...