ದಾವಣಗೆರೆ, (ಜ.24): ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧ ದಂಪತಿಗಳ ಭೀಕರ ಕೊಲೆ ಮಾಡಿರುವ ಘಟನೆ ತಾಲೂಕಿನ ಎಲೆಬೇತೂರ ಗ್ರಾಮದಲ್ಲಿ ನಡೆದಿದೆ. ಗುರುಸಿದ್ದಯ್ಯ (80), ಸರೋಜಮ್ಮ (75) ಕೊಲೆಯಾದ ವೃದ್ಧ ದಂಪತಿ.
ದುಷ್ಕರ್ಮಿಗಳು ತಡರಾತ್ರಿ ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ. 3 ಹೆಣ್ಣು ಮಕ್ಕಳನ್ನ ಮದ್ವೆ ಮಾಡಿ ಕೊಟ್ಟ ಬಳಿಕ ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಿದ್ದರು. ರಾತ್ರಿ ಮನೆಗೆ ನುಗ್ಗಿ ಕೊಲೆ ಮಾಡಿ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾರೆ. ಪಕ್ಕದ ಮನೆಯವರು ಬೆಳಗ್ಗೆ ಸರೋಜಮ್ಮ ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಶ್ವಾನದಳ ವೃದ್ಧ ದಂಪತಿಯ ಮೊಮ್ಮಗನ ಮೇಲೆ ಸಂಶಯ ವ್ಯಕ್ತಪಡಿಸಿದೆ. ಸ್ನಿಫರ್ ಡಾಗ್ ತುಂಗಾ ಘಟನೆ ನಡೆದ ಸ್ಥಳದಲ್ಲಿದ್ದ ಮೊಮ್ಮಗನ ಬಳಿ ನಿಂತುಕೊಂಡಿದೆ. ಈ ಹಿನ್ನೆಲೆ ಪೊಲೀಸರು ಮೊಮ್ಮಗನನ್ನು ವಶಕ್ಕೆ ಪಡೆದಿದ್ದಾರೆ.
ನಂತರ, 2 ಕಿ.ಮೀ ದೂರದ ಬಸಾಪುರ ಗ್ರಾಮದ ಮಗಳ ಮನೆ ಮುಂದೆ ಹೋಗಿ ಶ್ವಾನ ನಿಂತಿದ್ದು, ದಾವಣಗೆರೆ ಗ್ರಾಮಾಂತರ ಪೊಲೀಸರಿಂದ ತನಿಖೆ ತೀವ್ರಗೊಂಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…