Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ವಿಶ್ವವಿದ್ಯಾಲಯ : ಎಸ್.ಜೆ.ಎಂ. ಕಾಲೇಜಿಗೆ 5 ನೇ ರ‌್ಯಾಂಕ್

---Advertisement---

ಚಿತ್ರದುರ್ಗ, ಫೆಬ್ರವರಿ. 08 : ದಾವಣಗೆರೆ ವಿಶ್ವವಿದ್ಯಾಲಯವು ನಡೆಸಿದ 2023-24ನೇ ಸಾಲಿನ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ

ಮಹಾವಿದ್ಯಾಲಯದ ಟಿ. ಮಹಾಲಕ್ಷ್ಮಿ 5ನೇ ರ್ಯಾಂಕ್ ಗಳಿಸಿರುತ್ತಾರೆ ಎಂದು ಪ್ರಾಂಶುಪಾಲರಾದ ಡಾ.
ಎಸ್.ಹೆಚ್. ಪಂಚಾಕ್ಷರಿ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ ಉಜ್ಮಾ ಮರಿಯಂ, ಲೀಲಾ ಜಿ.ಎಂ., ಸಹನ ಟಿ. ಮತ್ತು ವಿಜ್ಞಾನ ವಿಭಾಗದಲ್ಲಿ
ತೇಜಸ್ವಿನಿ ವಿ., ಸಾರಿಯ ತೆಹರಿಂ, ಮೇಘನ ವಿ. ಹಾಗೂ ಕಾಮರ್ಸ್ ವಿಭಾಗದಲ್ಲಿ ಬಿಂದುಶ್ರೀ ಟಿ.,
ರಿಯಾ ಎಂ. ಬಾಫ್ನ, ಅಮೃತ ಎಂ. ಇವರುಗಳು ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದು,
ಕಾಲೇಜಿಗೆ ಉತ್ತಮ ಫಲಿತಾಂಶ ಲಭ್ಯವಾಗಿರುತ್ತದೆ ಎಂದಿದ್ದಾರೆ.
5ನೇ ರ್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿರುವ ಟಿ. ಮಹಾಲಕ್ಷ್ಮಿ ಅವರನ್ನು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...