Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಲು ದಯಾನಂದ ಸ್ವಾಮೀಜಿ ಒತ್ತಾಯ..!

Facebook
Twitter
Telegram
WhatsApp

ಹುಬ್ಬಳ್ಳಿ: ಕಳೆದ ಕೆಲವು ದಿನಗಳಿಂದ ಮೊಟ್ಟೆ ಹೋರಾಟ ಶುರುವಾಗಿದೆ. ಸ್ವಾಮೀಜಿಗಳೆಲ್ಲಾ ಒಂದಾಗಿ ಶಾಲೆಯಲ್ಲಿ ಮೊಟ್ಟೆ ನೀಡುವುದನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಮಕ್ಕಳಲ್ಲಿ ಪೋಷಕಾಂಶದ ಕೊರತೆಯಿಂದಾಗಿ ಸರ್ಕಾರಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆಯನ್ನು ನೀಡಲಾಗುತ್ತಿದೆ. ಶಾಲೆಯಲ್ಲಿ ಮೊಟ್ಟೆ ತಿನ್ನದ ಸಮುದಾಯದ ಮಕ್ಕಳು ಇರ್ತಾರೆ. ಹೀಗಾಗಿ ಮೊಟ್ಟೆ ನೀಡುವುದನ್ನು ನಿಲ್ಲಿಸಿ ಇಲ್ಲವಾದರೇ ಉಗ್ರ ಹೋರಾಟ ಮಾಡ್ತೇನೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಇದೀಗ ದಯಾನಂದ ಸ್ವಾಮೀಜಿ ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ ಎಂದಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪೋಷ್ಟಿಕಾಂಶದ ಹೆಸರಿನಲ್ಲಿ ಸರ್ಕಾರ ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮೊಟ್ಟೆ ತಿನ್ನಿಸುವುದನ್ನು ಕೈ ಬಿಡಬೇಕು. ಮೊಟ್ಟೆಗಿಂತಲೂ ಪೋಷ್ಟಿಕವಾದ ಆಹಾರ ಪದಾರ್ಥ ಸಸ್ಯಹಾರದಲ್ಲಿದೆ. ಪೋಷಕಾಂಶ ಹೆಚ್ಚಾಗಿರುವ ಸಸ್ಯಹಾರವನ್ನೇ ನೀಡಲಿ ಎಂದಿದ್ದಾರೆ.

ಶಾಲೆಯಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡಿ ಮೊಟ್ಟೆಯನ್ನಲ್ಲ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಕೊಡಲಾಗುತ್ತೆ. ಎಲ್ಲರನ್ನು ಒಂದೇ ತರವಾಗಿ ಸರ್ಕಾರ ನೋಡಬೇಕು. ಕಾಂಗ್ರೆಸ್ – ಜೆಡಿಎಸ್ ತೆಗೆದಿರು ಈ ಯೋಜನೆಯನ್ನ ಬಿಜೆಪಿ ಏಕೆ ಮುಂದುವರೆಸಿದೆ. ಲಿಂಗಾಯತ, ಬ್ರಾಹ್ಮಣರಿಂದ ಮತ ಪಡೆದ ಬಿಜೆಪಿ ಈ ರೀತಿ ಏಕೆ ಮಾಡಿದೆ ಎಂದು ಅಖಿಲ ಭಾರತ ಸಸ್ಯಹಾರಿ ಪ್ರಧಾನ ಸಂಚಲಾಕರಾದ ದಯಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಇನ್ನು ಶಾಲೆಯಲ್ಲಿ ಮೊಟ್ಟೆಯನ್ನು ಮುಕ್ತಗೊಳಿಸದಿದ್ದರೆ,ನಮ್ಮವರಿಗೆ ಪ್ರತ್ಯೇಕ ಶಾಲೆ ಮಾಡಿ ಎಂದಿದ್ದಾರೆ. ಸಸ್ಯಹಾರಿ ಪರ ಲಕ್ಷಾಂತರ ಮಕ್ಕಳಿದ್ದಾರೆ. ಅವರಿಗೆ ಪ್ರತ್ಯೇಕ ಅಂಗನವಾಡಿ ಮತ್ತು ಶಾಲೆಯನ್ನು ತೆರೆಯಬೇಕು. ಈ ಸಂಬಂಧ ಡಿಸೆಂಬರ್ 20ರಂದು ಅಧಿವೇಶನ ಸಂದರ್ಭದಲ್ಲಿ ಸಂತ ಸಮಾವೇಶ ಮತ್ತು ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

error: Content is protected !!