Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ : ವಾರಾಂತ್ಯ ಕರ್ಫ್ಯೂ, ಏನಿರುತ್ತೆ, ಏನಿರಲ್ಲ ? 

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.06):ಕೋವಿಡ್-19ರ ಮೂರನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿಯಂತೆ ಜನವರಿ 19ರವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕಫ್ರ್ಯೂ ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.

ವಾರಾಂತ್ಯದ ಎರಡು ದಿನ ಕಫ್ರ್ಯೂ ಶುಕ್ರವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವೆರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಚಟುವಟಕೆಗಳನ್ನು  ಹೊರತುಪಡಿಸಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಸರ್ಕಾರದ ಅಧೀನ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಕೋವಿಡ್-19 ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಓಡಾಟಕ್ಕೆ ಯಾವುದೇ ಅಡ್ಡಿ ಇಲ್ಲ.

ಎಲ್ಲ ಸಾರ್ವಜನಿಕ ಉದ್ಯಾನಗಳ ಬಾಗಿಲು ಬಂದ್, ಎಲ್ಲ ರೀತಿಯ ಉದ್ಯಮಗಳು ಮತ್ತು ಐಟಿ ಉದ್ಯಮಗಳಿಗೆ ಕಫ್ರ್ಯೂನಿಂದ ವಿನಾಯಿತಿ ನೀಡಲಾಗಿದೆ. ಎಲ್ಲಾ ಉದ್ಯೋಗಿಗಳ ಓಡಾಟಕ್ಕೆ ಅವಕಾಶವಿದೆ. ಸಿಬ್ಬಂದಿ ಕೆಲಸ ಮಾಡುವ ಸಂಸ್ಥೆಗಳ ಗುರುತಿನ ಚೀಟಿ ಹೊಂದಿರಬೇಕು. ರೋಗಿಗಳು ಮತ್ತು ಅವರನ್ನು ನೋಡಿಕೊಳ್ಳುವವರು ತುರ್ತುಸಂದರ್ಭದಲ್ಲಿ ಓಡಾಟಕ್ಕೆ ಅವಕಾಶವಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹೋಗುವವರಿಗೆ ಅಡ್ಡಿ ಇಲ್ಲ. ಆಹಾರ, ದಿನಸಿ ಹಣ್ಣು-ತರಕಾರಿ, ಮೀನು, ಮಾಂಸ, ಹಾಲಿನ ಬೂತ್ ಮತ್ತು ಪ್ರಾಣಿಗಳ ಆಹಾರಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ.

ನ್ಯಾಯಬೆಲೆ ಅಂಗಡಿ, ಬೀದಿ ವ್ಯಾಪಾರಿಗಳಿಗೂ ಅವಕಾಶವಿದೆ. ಮನೆಗಳಿಗೆ ವಿವಿಧ ಪದಾರ್ಥ ಮತ್ತು ವಸ್ತುಗಳನ್ನು ತಂದು ಕೊಡುವುದಕ್ಕೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್‍ಗಳಿಂದ ಆಹಾರ ಪಾರ್ಸಲ್ ಮಾತ್ರ, ಕುಳಿತು ತಿನ್ನಲು ಅವಕಾಶ ಇರುವುದಿಲ್ಲ. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅವಕಾಶವಿದ್ದು ಟಿಕೆಟ್ ತೋರಿಸಬೇಕು.

ಹೊರಾಂಗಣ ಮದುವೆಗಳಿಗೆ 200 ಜನರಿಗೆ ಒಳಾಂಗಣ ಮದುವೆಗೆ 100 ಜನರನ್ನಷ್ಟೇ ಮಿತಿಗೊಳಿಸಲಾಗಿದೆ.

ಕೋವಿಡ್-19 ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವರದಕ್ಷಿಣೆ ಕಿರುಕುಳ : ಆರೋಪಿಗೆ 5 ವರ್ಷ ಶಿಕ್ಷೆ ವಿಧಿಸಿ ಚಿತ್ರದುರ್ಗ ಕೋರ್ಟ್ ತೀರ್ಪು

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.19 : ವರದಕ್ಷಿಣೆ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಲಯ 5 ವರ್ಷಗಳ ಸಾದಾ ಸಜೆ ಹಾಗೂ ರೂ. 10,000/- ಗಳ ದಂಡ ವಿಧಿಸಿ ತೀರ್ಪು ನೀಡಿದೆ. ಚಿತ್ರದುರ್ಗ ನಗರದ ಸೈಯದ್

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ ಎಂದರೆ ಆಕೆಯ ಮನಸ್ಸು ಹೇಗಾಗಿರಬಹುದು. ಇಬ್ಬರು

ಮಹಿಳೆ ಆರ್ಥಿಕ ಸ್ವಾವಲಂಬಿಯಾಗಿರುವುದರಿಂದ ಸಾಮಾಜಿಕ ಪರಿಸ್ಥಿತಿ ಸುಧಾರಿಸಿದೆ : ಶ್ರೀಮತಿ ಶಶಿಕಲಾ ರವಿಶಂಕರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ.19 :  ಪುರಾಣ ಕಾಲದಿಂದಲೂ ಸಹಾ ಮಹಿಳೆ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅದು ಇಂದಿಗೂ ಸಹಾ ತಪ್ಪಿಲ್ಲ,

error: Content is protected !!