Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಯನಾಡಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಡಿಸಿ ಮೇಘಶ್ರೀ : ಚಿತ್ರದುರ್ಗದ ಮಗಳ ಕಾರ್ಯಕ್ಕೆ ಮೆಚ್ಚುಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 05 : ಸುಂದರವಾಗಿದ್ದ ವಯನಾಡು ಭೂಕುಸಿತದಿಂದಾಗಿ ಸ್ಮಶಾನದಂತಾಗಿದೆ. ಊರಿಗೆ ಊರೇ ಕೊಚ್ಚಿ ಹೋಗಿದೆ. ಅದೆಷ್ಟೋ ದೇಹಗಳು ಮಣ್ಣಿನಲ್ಲಿ ಊತು ಹೋಗಿವೆ. ಕಳೆದು ಹೋದವರಿಗಾಗಿ ಕಾಯುತ್ತಿರುವವರು ಅದೆಷ್ಟೋ ಜನ. ವಯನಾಡಿನ ಪರಿಸ್ಥಿತಿಯನ್ನು ನೋಡಿದವರಿಗೆ ಎಂಥವರಿಗೂ ಭಯವಾಗುತ್ತೆ. ಆದರೆ ಆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ನಿಷ್ಠೆಯಿಂದ ಕಾರ್ಯ ನಿವರ್ಹಿಸುತ್ತಿರುವುದು ಮೇಘಶ್ರೀ.

ವಯನಾಡಿನ ಭೂ ಕುಸಿತಕ್ಕೂ ಕೆಲವೇ ದಿನಗಳ ಹಿಂದಷ್ಟೇ ಮೇಘಶ್ರೀ ಅವರಿಗೆ ವಯನಾಡಿನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿತ್ತು. ಪ್ರತಿ ಕ್ಷಣ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಎಲ್ಲವನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಯ ಕಾರ್ಯಕ್ಕೆ ಕೇವಲ ಕೇರಳ ಜನತೆ ಮಾತ್ರ ಮೆಚ್ಚುಗೆ ವ್ಯಕ್ತಪಡಿಸಿಲ್ಲ, ಕರ್ನಾಟಕದ ಮಂದಿಗೂ ಹೆಮ್ಮೆ ಅನಿಸಿದೆ.

ಯಾಕಂದ್ರೆ ಮೇಘಶ್ರೀ ಕರ್ನಾಟಕದವರು ಎಂಬುದು ಮತ್ತೊಂದು ಹೆಮ್ಮೆಯ ವಿಚಾರ. ಜಿಲ್ಲಾಧಿಕಾರಿ ಮೇಘಶ್ರೀ ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. ಎಸ್ ಬಿ ಐ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರುದ್ರಮುನಿ ಅವರ ಪುತ್ರಿ. ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಮೇಘಶ್ರೀ ತನ್ನ ಆರಂಭದ ವಿದ್ಯಾಭ್ಯಾಸವನ್ನು ದೊಡ್ಡೇರಿ, ಚಳ್ಳಕೆರೆ, ಚಿತ್ರದುರ್ಗದಲ್ಲಿ ಮುಗಿಸಿದ್ದರು. ಬಳಿಕ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರಿಗೆ ಬಂದು, ಇಂಜಿನಿಯರಿಂಗ್ ಮುಗಿಸಿ, ಒಂದೆರಡು ವರ್ಷ ಖಾಸಗಿ ಕಂಪನಿಯಲ್ಲಿ ಕೆಲಸವನ್ನು ಮಾಡಿದ್ದರು.

ಐಎಎಸ್ ಆಗುವ ಕನಸು ಕಂಡಿದ್ದ ಮೇಘಶ್ರೀ, ಕಷ್ಟಪಟ್ಟು ಓದಿ ಕಡೆಗೂ ಐಎಎಸ್ ಪರೀಕ್ಷೆಯನ್ನು ಪಾಸ್ ಮಾಡಿದರು. ತಿರುವನಂತಪುರ ಸೇರಿದಂತೆ ಹಲವು ಕಡೆ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹರ್ತಿಕೋಟೆ ಗ್ರಾಮದ ಡಾ.ವಿಕ್ರಮ ಸಿಂಹ ಅವರನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ವಯನಾಡಿನ ಭೂಕುಸಿತಕ್ಕೂ ಮುನ್ನ ಅಂದ್ರೆ ಕಳೆದ ಇಪ್ಪತ್ತು ದಿನಗಳಿಗೂ ಮುನ್ನ ಕೇರಳದ ವಯನಾಡಿಗೆ ವರ್ಗಾವಣೆಗೊಂಡಿದ್ದರು. ಸದ್ಯ ವಯನಾಡಿನ ಭೂಕುಸಿತದ ಸ್ಥಳಗಳಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಸತ್ತವರ ಸಂಬಂಧಿಕರು ಸಿಗದೆ ಇದ್ದಾಗ ತಾವೇ ಮುಂದೆ ನಿಂತು ಅಂತ್ಯ ಸಂಸ್ಕಾರ ಮಾಡಿದ್ದಾರೆ. ಜಿಲ್ಲಾಧಿಕಾರಿಯ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...