Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್ಸಿಬಿಗೆ ವಿಶ್ ಮಾಡಿದ ಡಿಸಿಎಂ : ಏನಂದ್ರು ಡಿಕೆಶಿ..?

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು; ಇಂದು ಎಲ್ಲೆಲ್ಲೂ ಆರ್ಸಿಬಿಯದ್ದೇ ಮಾತು. ಹದಿನೆಂಟು ವರ್ಷಗಳ ಕನಸು ನನಸಾಗುವ ದಾರಿಯಲ್ಲಿ ಆರ್ಸಿಬಿ ಅಭಿಮಾನಿಗಳು ಇದ್ದಾರೆ. ಮ್ಯಾಚ್ ಶುರುವಾಗುವುದನ್ನೆ ಕಾಯ್ತಾ ಕೂತಿದ್ದಾರೆ. ಇದರ‌ ನಡುವೆ ಪೂಜೆ ಪುನಸ್ಕಾರಗಳು ಶುರುವಾಗಿದ್ದು, ಎಲ್ಲರೂ ಆರ್ಸಿಬಿಗೆ ಹಾರೈಸುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ವಿಶ್ ಮಾಡಿದ್ದಾರೆ.

ಅದರಲ್ಲೂ ಆರ್ಸಿಬಿ ಜರ್ಸಿ ಧರಿಸಿ ವಿಶ್ ಮಾಡಿದ್ದಾರೆ. ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷದಿಂದ ಕಾತುರದಿಂದ ಕಾಯುತ್ತಾ ಕುಳಿತಿದ್ದೇವೆ. ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು, ಆರ್ಸಿಬಿ ಕೊನೆಗೆ ಐಪಿಎಲ್ ನಲ್ಲಿ ಫೈನಲ್ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ. ಇದು ಕೇವಲ ಜೆರ್ಸಿ ಅಲ್ಲ. ಅದರ ಮೇಲೆ ಮಿಲಿಯನ್, ಮಿಲಿಯನ್ ಡ್ರೀಮ್ ಗಳು ಇದಾವೆಮ ನಾವೂ ನೊಂದಿಗೆ ಇದ್ದೇವೆ.

ಕರ್ನಾಟಕ ಹಾಗೂ ಇಲ್ಲಿನ ಸರ್ಕಾರವೆಲ್ಲಾ ನಿಮ್ಮೊಂದಿಗೆ ನಿಂತಿದೆ. ಆರ್ಸಿಬಿ ಹುಡುಗರೇ ತವರಿಗೆ ಕಪ್ ಗೆದ್ದುಕೊಂಡು ಬನ್ನಿ. ಟ್ರೋಫಿಗಾಗಿ ಕರ್ನಾಟಕದ ಕೋಟಿ ಕೋಟಿ ಜನರು ಹಾಗೂ ನಾನು ಕಾಯುತ್ತಿದ್ದೇನೆ. ಎಲ್ಲರಿಗೂ ಆಲ್ ದಿ ಬೆಸ್ಟ್. ಸುಧೀರ್ಘ 18 ವರ್ಷಗಳ ಕಾಲ ಕಪ್ ಕೊರಗು ನೀಗೋಕೆ ಒಂದೇ ಒಂದು ಹೆಜ್ಜೆ ಬಾಕಿ ಇದೆ. ಅಹ್ಮದಾಬಾದ್ ನಮೋ ಅಂಗಳದಲ್ಲಿ ನಡೆಯುವ ಫೈನಲ್ ಫೈಟ್ ನಲ್ಲಿ ಆರ್ಸಿಬಿ ದಿಟ್ಟ ಹೆಜ್ಜೆ ಇಟ್ಟರೆ ಅಸಂಖ್ಯ ಅಭಿಮಾನಿಗಳ ಕನಸು ಇಂದು ನೆರವೇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...