Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಳ್ಳಾರಿ ಬಾಣಂತಿಯರ ಸಾವು: ಔಷಧ ಕಾರಣವಲ್ಲ ಎಂದ ಮಹಿಳಾ ಆಯೋಗ..!

---Advertisement---

ಬಳ್ಳಾರಿ: ಕಳೆದ ಕೆಲವು ತಿಂಗಳಿನಿಂದ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ರಾಜ್ಯದಲ್ಲಿಯೇ ಸಂಚಲನ ಮೂಡಿಸಿತ್ತು. ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಕೂಡ ಮಾಡಿದ್ದರು. ಔಷಧಿಯನ್ನು ಪ್ರಯೋಗಾಲಯಕ್ಕೂ ಕಳುಹಿಸಲಾಗಿತ್ತು. ಈ ಸಂಬಂಧ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ನೀರಿನ ಟ್ಯಾಂಕರ್ ಗಳ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಮಾತನಾಡಿದ ನಾಗಲಕ್ಷ್ಮೀ ಚೌದರಿ, ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು. ಹೆರಿಗೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇದೆ. ಹೀಗಾಗಿ ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ ಟೇಬಲ್ ಸೇರಿದಂತೆ ಇಡೀ ಹೆರಿಗೆಯ ಸ್ವ್ಯಾಬ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಾನು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಇನ್ನು ಬಾಣಂತಿಯರ ಸಾವಿನಿಂದ ಜನ ಆತಂಕಗೊಂಡಿದ್ದಾರೆ. ಹೀಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಯಲ್ಲಿ ಶೇಕಡ 50 ರಷ್ಟು ಕುಸಿತವಾಗಿದೆ. ಯಾಕಂದ್ರೆ ಸಿಜೇರಿಯನ್ ಆದ ಬಳಿಕ ಬಾಣಂತಿಯರ ಸರಣಿ ಸಾವು ಸಾಮಾನ್ಯವಾಗಿಯೇ ಆತಂಕ ಹುಟ್ಟಿಸಿದೆ. ಅದರಲ್ಲೂ ಹೆರಿಗೆ ಸಮಯದಲ್ಲಿ ಆತಂಕ ಹೆಚ್ಚಾದರೇನೆ ಬಿಪಿ ಕಂಟ್ರೋಲ್ ಬರಲ್ಲ, ಕೂಲ್ ಆಗಿರಿ ಎಂಬ ಸಲಹೆ ನೀಡುತ್ತಾರೆ. ಇಂಥ ಸಂದರ್ಭದಲ್ಲಿ ಬಾಣಂತಿಯರ ಸಾವು ಹೆರಿಗೆಗೆಂದು ಹೊರಟ ಗರ್ಭಿಣಿಯರಿಗೆ ಸಹಜವಾಗಿಯೇ ಆತಂಕ ತರಿಸುತ್ತದೆ. ಆ ಆತಂಕದಿಂದಾನು ಸಮಸ್ಯೆಗಳಾಗಬಹುದು. ಹೀಗಾಗಿ ಸಾಕಷ್ಟು ಜನ ಬೇರೆ ಆಸ್ಪತ್ರೆಗಳಿಗೆ ಹೋಗುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...