ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕುರುಕುಂಟಾ/ ಸೇಡಂ ಸೆ. 04 : ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಮೂಲದ ಕಲ್ಲು ಗಣಿಗಾರಿಕೆ ಕಾರ್ಮಿಕನಾಗಿರುವ ರಾಜು ನಾಮವಾರ(40) ವ್ಯಕ್ತಿ ಕಳೆದೆರೆಡು ದಿನಗಳಿಂದ ಸಂಗಾವಿ ಕಾಗಿಣಾ ನದಿಯಲ್ಲಿ ಕಾಣೆಯಾಗಿದ್ದು, ಇಂದು ವ್ಯಕ್ತಿಯು ಪಾರ್ಥಿವ ಶರೀರವಾಗಿ ದೊರೆತಿದೆ.
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಭೋವಿ ಸಮಾಜದ ಮುಖಂಡರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜು ನಾಮವರರವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಮತ್ತು ಅವರ ಅಗಲಿಕೆಯ ನೋವು ಭರಿಸಲು ಅವರ ಕುಟುಂಬದ ಸದಸ್ಯರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಶ್ರೀಗಳು ದುಖಃತಪ್ತ ಕುಟುಂಬದ ಒಡತಿ ಶ್ರೀಮತಿ ನರಸಮ್ಮ ರಾಜು ನಾಮವರ ಅವರಿಗೆ ಭಕ್ತರ ಸಹಕಾರ ಹಾಗೂ ಶ್ರೀಪೀಠದಿಂದ 50.000 ರೂಪಾಯಿಗಳನ್ನು ಸಹಾಯಧನ ನೀಡಿದರು. ದುಖಃತಪ್ತ ಕುಟುಂಬದ ಮಕ್ಕಳಾದ ಕುಮಾರ ಅರುಣಾ ರಾಜು ನಾಮವರ ಕುಮಾರಿ ಅಕ್ಷತಾ ರಾಜು ನಾಮವರ ಇವರನ್ನು ಶ್ರೀಪೀಠದ ಆಶ್ರಯಕ್ಕೆ ಒಪ್ಪಿಸಿದರೆ ಸಂಪೂರ್ಣ ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳಲಾಗುವುದು ಎಂದು ಅಭಯಹಸ್ತ ನೀಡಿದರು.
ಈ ಸಂದರ್ಭದಲ್ಲಿ ಗುಂಡಪ್ಪ ಸಳುಂಕೆ, ರಾಮಯ್ಯ ಪೂಜಾರಿ, ವಿಠ್ಠಲ ನೆಲೋಗಿ, ಸಂಜು ನಗರಾಧ್ಯಕ್ಷ, ಯಲ್ಲಪ್ಪ ಪೂಜಾರಿ, ಗುಂಡಪ್ಪ ಬಿಜಾಪುರ, ವಿಜಯಕುಮಾರ ಗಿರಿಜಾಪುರ, ರಮೇಶ ನಾಮವರ, ಕಾಶಿನಾಥ ದೊಡ್ಡಮನಿ, ವಿಠಲ ಕಾಶಿ ಚಿತ್ತಾಪುರ, ರಾಮಸ್ವಾಮಿ ಕುರಕುಂಟಾ, ಭೀಮಶಂಕರ, ಶ್ರೀಹರಿ ಉಪಸ್ಥಿತಿಯಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್