Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಮಿಕ ಸಾವು : ಸಾಂತ್ವನ ಹೇಳಿ ಸಹಾಯ ಧನ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

---Advertisement---

 

ಕುರುಕುಂಟಾ/ ಸೇಡಂ ಸೆ. 04 : ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಮೂಲದ ಕಲ್ಲು ಗಣಿಗಾರಿಕೆ ಕಾರ್ಮಿಕನಾಗಿರುವ ರಾಜು ನಾಮವಾರ(40) ವ್ಯಕ್ತಿ ಕಳೆದೆರೆಡು ದಿನಗಳಿಂದ ಸಂಗಾವಿ ಕಾಗಿಣಾ ನದಿಯಲ್ಲಿ ಕಾಣೆಯಾಗಿದ್ದು, ಇಂದು ವ್ಯಕ್ತಿಯು ಪಾರ್ಥಿವ ಶರೀರವಾಗಿ ದೊರೆತಿದೆ.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಭೋವಿ ಸಮಾಜದ ಮುಖಂಡರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜು ನಾಮವರರವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಮತ್ತು ಅವರ ಅಗಲಿಕೆಯ ನೋವು ಭರಿಸಲು ಅವರ ಕುಟುಂಬದ ಸದಸ್ಯರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಶ್ರೀಗಳು ದುಖಃತಪ್ತ ಕುಟುಂಬದ ಒಡತಿ ಶ್ರೀಮತಿ ನರಸಮ್ಮ ರಾಜು ನಾಮವರ ಅವರಿಗೆ ಭಕ್ತರ ಸಹಕಾರ ಹಾಗೂ ಶ್ರೀಪೀಠದಿಂದ 50.000 ರೂಪಾಯಿಗಳನ್ನು ಸಹಾಯಧನ ನೀಡಿದರು. ದುಖಃತಪ್ತ ಕುಟುಂಬದ ಮಕ್ಕಳಾದ ಕುಮಾರ ಅರುಣಾ ರಾಜು ನಾಮವರ ಕುಮಾರಿ ಅಕ್ಷತಾ ರಾಜು ನಾಮವರ ಇವರನ್ನು ಶ್ರೀಪೀಠದ ಆಶ್ರಯಕ್ಕೆ ಒಪ್ಪಿಸಿದರೆ ಸಂಪೂರ್ಣ ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳಲಾಗುವುದು ಎಂದು ಅಭಯಹಸ್ತ ನೀಡಿದರು.

ಈ ಸಂದರ್ಭದಲ್ಲಿ ಗುಂಡಪ್ಪ ಸಳುಂಕೆ, ರಾಮಯ್ಯ ಪೂಜಾರಿ, ವಿಠ್ಠಲ ನೆಲೋಗಿ, ಸಂಜು ನಗರಾಧ್ಯಕ್ಷ, ಯಲ್ಲಪ್ಪ ಪೂಜಾರಿ, ಗುಂಡಪ್ಪ ಬಿಜಾಪುರ, ವಿಜಯಕುಮಾರ ಗಿರಿಜಾಪುರ, ರಮೇಶ ನಾಮವರ, ಕಾಶಿನಾಥ ದೊಡ್ಡಮನಿ, ವಿಠಲ ಕಾಶಿ ಚಿತ್ತಾಪುರ, ರಾಮಸ್ವಾಮಿ ಕುರಕುಂಟಾ, ಭೀಮಶಂಕರ, ಶ್ರೀಹರಿ ಉಪಸ್ಥಿತಿಯಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment