Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ ರದ್ದು : ಕತಾರ್ ನ್ಯಾಯಾಲಯದ ಮಹತ್ವದ ಆದೇಶ

Facebook
Twitter
Telegram
WhatsApp

ಸುದ್ದಿಒನ್ : ಕತಾರ್‌ನಲ್ಲಿ ಗೂಢಚಾರಿಕೆ ನಡೆಸಿದ ಆರೋಪದಲ್ಲಿ 8 ಭಾರತೀಯರಿಗೆ ಅಲ್ಲಿನ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ತೀರ್ಪು ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು.  ಇದರೊಂದಿಗೆ ಭಾರತೀಯ ನೌಕಾಪಡೆಯ ಆ 8 ಮಾಜಿ ಅಧಿಕಾರಿಗಳ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದರು. ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅವರ ಕುಟುಂಬಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಣಕ್ಕಿಳಿದ ಕೇಂದ್ರ ವಿದೇಶಾಂಗ ಸಚಿವಾಲಯ ಕತಾರ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ. ಈ ಆದೇಶದಲ್ಲಿ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕಡಿಮೆ ಮಾಡಲಾಗಿದೆ. ಕತಾರ್ ನ್ಯಾಯಾಲಯವು ಗುರುವಾರ ಮರಣದಂಡನೆಯನ್ನು ಜೈಲು ಶಿಕ್ಷೆಯಾಗಿ ತೀರ್ಪು ನೀಡಿತು.

ಕತಾರ್ ನ್ಯಾಯಾಲಯದ ತೀರ್ಪನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಹಿರಂಗಪಡಿಸಿದೆ. ಆದರೆ, ಆ 8 ಮಂದಿ ಭಾರತೀಯರಿಗೆ ಎಷ್ಟು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ತೀರ್ಪಿನ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಬಗ್ಗೆ ಅವರು ಕತಾರ್ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳಲು ಕಾನೂನು ತಂಡದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದರು. ತೀರ್ಪಿನ ಪ್ರತಿ ಬಂದ ನಂತರ ಸಂಪೂರ್ಣ ವಿವರ ತಿಳಿಯಲಿದೆ ಎಂದು ವಿವರಿಸಿದರು.

ಭಾರತದ 8 ಮಾಜಿ ನೌಕಾಪಡೆ ಅಧಿಕಾರಿಗಳು ಅಲ್ ದಹ್ರಾದಲ್ಲಿ ಕೆಲಸ ಮಾಡುತ್ತಿದ್ದರು. ಕತಾರ್‌ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುವ ಅಲ್ ದಹ್ರಾವನ್ನು ಓಮನ್‌ನ ಮಾಜಿ ವಾಯುಪಡೆಯ ಅಧಿಕಾರಿ ನಡೆಸುತ್ತಿದ್ದಾರೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಭಾರತದ ಈ 8 ಜನರನ್ನು ಕತಾರ್ ನ ಅಧಿಕಾರಿಗಳು 2022ರ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಿದ್ದರು. ಅವರು ಜಲಾಂತರ್ಗಾಮಿ ಚಟುವಟಿಕೆಗಳಲ್ಲಿ ಬೇಹುಗಾರಿಕೆ ಮತ್ತು ಇತರ ದೇಶಗಳೊಂದಿಗೆ ರಹಸ್ಯಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕತಾರ್ ನ್ಯಾಯಾಲಯವು ಈ ವಿಷಯದ ಬಗ್ಗೆ ಸುದೀರ್ಘ ವಿಚಾರಣೆಯನ್ನು ನಡೆಸಿತ್ತು. ನಂತರ, ಕತಾರ್ ನ್ಯಾಯಾಲಯವು ಈ ವರ್ಷದ ಅಕ್ಟೋಬರ್‌ನಲ್ಲಿ ಮಹತ್ವದ ತೀರ್ಪು ನೀಡಿತ್ತು. ಆ 8 ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿತ್ತು. ಇದರಿಂದ 8 ಮಂದಿ ಕುಟುಂಬಸ್ಥರು ಈ ವಿಷಯ ತಿಳಿದು ಕಣ್ಣೀರಿಟ್ಟಿದ್ದರು. ಕೂಡಲೇ ಅವರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು. ಈ ತೀರ್ಪಿನ ವಿರುದ್ಧ ಭಾರತದ ವಿದೇಶಾಂಗ ಸಚಿವಾಲಯ ಕತಾರ್ ರಾಜಧಾನಿ ದೋಹಾದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯನ್ನು ಪರಿಗಣಿಸಿದ ಕತಾರ್ ನ್ಯಾಯಾಲಯವು ಅವರ ಮರಣದಂಡನೆಯನ್ನು ರದ್ದುಗೊಳಿಸಿತು ಮತ್ತು ಅದನ್ನು ಜೈಲು ಶಿಕ್ಷೆಗೆ ಪರಿವರ್ತಿಸಿದೆ.

ಆದರೆ ಈ ಪ್ರಕರಣದಲ್ಲಿ ಸೌರಭ್ ವಶಿಷ್ಠ್ ಮತ್ತು ನವತೇಜ್ ಗಿಲ್ ಭಾಗಿಯಾಗಿದ್ದು, ಈ ಹಿಂದೆ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಈಗ ಜೈಲು ಶಿಕ್ಷೆ ಪಾಲಾಗಿದ್ದಾರೆ. ಕಮಾಂಡರ್ ಗಳಾದ ಬೀರೇಂದ್ರ ಕುಮಾರ್ ವರ್ಮಾ, ಪೂರ್ಣೇಂದು ತಿವಾರಿ, ಸುಗುಣಾಕರ್ ಪಕಾಲ, ಸಂಜೀವ್ ಗುಪ್ತಾ, ಅಮಿತ್ ನಾಗ್ ಪಾಲ್ ಮತ್ತು ನಾವಿಕ ರಾಗೇಶ್ ಕೂಡ ಇದ್ದಾರೆ.
ಇವರಲ್ಲಿ ಕಮಾಂಡರ್ ಸುಗುಣಾಕರ್ ಆಂಧ್ರಪ್ರದೇಶದ ವಿಶಾಖ ಜಿಲ್ಲೆಯ ನಿವಾಸಿಯಾಗಿದ್ದಾರೆ. ಸದ್ಯ ಆ 8 ಮಂದಿಯ ಮರಣದಂಡನೆಯನ್ನು ರದ್ದುಪಡಿಸಿ, ಜೈಲು ಶಿಕ್ಷೆಗೆ ಬದಲಾಯಿಸಿರುವುದು ಅವರ ಕುಟುಂಬಗಳಲ್ಲಿ ಕೊಂಚ ಸಮಾಧಾನ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!