Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಲ್ ನಲ್ಲಿ ಕ್ರಿಸ್ ಮಸ್ ಹಬ್ಬದ ಅಲಂಕಾರ : ಗಲಾಟೆ ಮಾಡಿದ ಪುನೀತ್ ಕೆರೆಹಳ್ಳಿ ಮೇಲೆ ಎಫ್ಐಆರ್

Facebook
Twitter
Telegram
WhatsApp

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡಿರುವ ಪುನೀತ್ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ರಾಜ್ಯದ ಎಲ್ಲೆಡೆ ಕ್ರಿಸ್ ಮಸ್ ಹಬ್ಬ ಜೋರಾಗಿದೆ. ಮಾಲ್ ಗಳಲ್ಲಿ ಕ್ರಿಸ್ ಮಸ್ ಹಬ್ಬಕ್ಕೆ ಅಲಂಕಾರ ಮಾಡಲಾಗಿದೆ. ಮಾಲ್ ನಲ್ಲಿ ಕ್ರಿಸ್ ಮಸ್ ಅಲಂಕಾರ ಮಾಡಿದ್ದ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಗಲಾಟೆ ಮಾಡಿದ ಪ್ರಕರಣಕ್ಕೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ.

ಹೆಬ್ಬಾಳ ಸಮೀಪವಿರುವ ಮಾಲ್ ಆಫ್ ಏಷ್ಯಾಗೆ ನುಗ್ಗಿ ಗಲಾಟೆ ಮಾಡಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಮಾಲ್ ಗೆ ತನ್ನ ಸಂಗಡಿಗರೊಂದಿಗೆ ಪುನೀತ್ ಕೆರೆ ಹಳ್ಳಿ ಎಂಟ್ರಿ ಕೊಟ್ಟಿದ್ದು, ಯಾಕೆ ಕ್ರಿಸ್ ಮಸ್ ಟ್ರೀ ಅಲಂಕರಾ ಮಾಡಿದ್ದೀರಿ ಎಂದು ಅಲ್ಲಿನ ಮಾಲ್ ಸಿಬ್ಬಂದಿಯೊಂದಿಗೆ ಜಗಳಕ್ಕೆ ನಿಂತಿದ್ದಾರೆ. ಕ್ರಿಸ್ ಮಸ್ ಟ್ರೀ ಇಟ್ಟಿರುವುದಲ್ಲದೆ 200 ರೂಪಾಯಿ ಎಂಟ್ರಿ ಫೀಸ್ ಬೇರೆ ಇಟ್ಟಿದ್ದೀರಿ. ಇದಕ್ಕೆ ಕಾನೂ‌ನು ಇದೆಯಾ..? ಹಿಂದೂ ಹಬ್ಬಗಳಿಗೆ ನೀವೂ ಇದೇ ರೀತಿ ಅಲಂಕಾರ ಮಾಡುತ್ತೀರಾ..? ಜನವರಿ 22ಕ್ಕೆ ರಾಮಮಂದಿರ ಉದ್ಘಾಟನೆ ಇದೆ. ಅವತ್ತೂ ಕೂಡ ಇದೇ ರೀತಿ ಅಲಂಕಾರ ಮಾಡಬೇಕು. ಇಲ್ಲವಾದರೆ ಮಾಲ್ ಮುಂದೆ ಕೂತು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಲ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಮಾಲ್ ಆಫ್ ಏಷಿಯಾಗೆ ಬಂದ ಪೊಲೀಸೆಉ ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರನ್ನು ವಶಕ್ಕೆ ಪಡೆದು, ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಾಲ್ ನ ಮ್ಯಾನೇಜರ್ ಸ್ಟೀಫನ್ ನೀಡಿದ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!